ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ:
1949ರಲ್ಲಿ ಜನಿಸಿದ ಮನದೀಪ್ ರಾಯ್ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.
ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…