ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ:
1949ರಲ್ಲಿ ಜನಿಸಿದ ಮನದೀಪ್ ರಾಯ್ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.
ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…