ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.
500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ:
1949ರಲ್ಲಿ ಜನಿಸಿದ ಮನದೀಪ್ ರಾಯ್ ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು ಇವರು. ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.
ರಂಗಭೂಮಿ ಕಲಾವಿದರೂ ಆಗಿದ್ದ ಮನದೀಪ್ ರಾಯ್ ಪೋಷಕ ಪಾತ್ರದಲ್ಲಿ ಖ್ಯಾತಿ ಪಡೆದಿದ್ದರು.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…