ಚಿತ್ರ ಮಂಜರಿ

ಕನ್ನಡದ ಮೊದಲ ಜೀವನ ಆಧಾರಿತ ಸಿನಿಮಾ ವಿಜಯಾನಂದ ಭರ್ಜರಿ ಪ್ರದರ್ಶನ

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಸಂತೋಷ್ ಥಿಯೇಟರ್ ನಲ್ಲಿ ತಲೆ ಎತ್ತಿದ ದೊಡ್ಡ ಕಟೌಟ್ ತಲೆ ಎತ್ತಿದೆ. ಯಶಸ್ವಿ ಉಧ್ಯಮಿಯ ಜೀವನ ಹೋರಾಟದ ಕಥೆ ಇದಾಗಿದ್ದು, ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್ ಗಳಲ್ಲಿ ಪ್ರೀಮಿಯರ್ ಶೋ ಮಾಡಿದೆ.

ಸಂತೋಷ್ ಚಿತ್ರಂಮದಿರ ಸೇರಿದಂತೆ ರಾಜ್ಯದ ಹಲವು ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ, ಓವರ್‌ಸೀಸ್‌ನಲ್ಲಿ 350 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಜಯಾನಂದ ಆರ್ಭಟ ಶುರುವಾಗಿದೆ.

ಈ ಮೊದಲು ‘ಟ್ರಂಕ್’ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ವಿಆರ್​ಎಲ್ ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ ವಿಜಯಾನಂದ ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕರುನಾಡಿನ ಯಶಸ್ವಿ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನದ ವಿವರಗಳನ್ನು ಇಟ್ಟುಕೊಂಡು ‘ವಿಜಯಾನಂದ’ ಸಿನಿಮಾ ಮೂಡಿಬಂದಿದೆ. ನಿಹಾಲ್​, ಸಿರಿ ಪ್ರಹ್ಲಾದ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಶಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘ನಾನೇ ನರರಾಕ್ಷಸ’, ‘ಸುನಾಮಿ 143’, ‘ಪ್ರಾಯಶಃ’, ‘ಪಂಖುರಿ’, ‘ಮೈಸೂರು ಡೈರೀಸ್​’, ‘ಕ್ಷೇಮಗಿರಿಯಲ್ಲಿ ಕರ್ನಾಟಕ’, ‘ದ್ವಿಪಾತ್ರ’, ‘ಡಾ. 56’ ಸಿನಿಮಾಗಳು ಕೂಡ ಈ ವಾರ ತೆರೆಕಾಣುತ್ತಿವೆ. ಯಾವುದನ್ನು ನೋಡೋದು, ಯಾವುದನ್ನು ಬಿಡೋದು ಎಂಬ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ.

ಚಿತ್ರದಲ್ಲಿ ಪ್ರತಿಭಾವಂತ ಕಲಾವಿದರುಗಳಾದ ಅನಂತ್ ನಾಗ್, , ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ರಮೇಶ್ ಭಟ್ , ಶೈನ್ ಶೆಟ್ಟಿ, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್ ದಯಾಳ್ ಪದ್ಮನಾಭನ್, ಮುಂತಾದವರು ಇದ್ದಾರೆ.

andolana

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

3 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

4 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

5 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

6 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

7 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

7 hours ago