ಚಿತ್ರ ಮಂಜರಿ

ಕನ್ನಡದ ಮೊದಲ ಜೀವನ ಆಧಾರಿತ ಸಿನಿಮಾ ವಿಜಯಾನಂದ ಭರ್ಜರಿ ಪ್ರದರ್ಶನ

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಸಂತೋಷ್ ಥಿಯೇಟರ್ ನಲ್ಲಿ ತಲೆ ಎತ್ತಿದ ದೊಡ್ಡ ಕಟೌಟ್ ತಲೆ ಎತ್ತಿದೆ. ಯಶಸ್ವಿ ಉಧ್ಯಮಿಯ ಜೀವನ ಹೋರಾಟದ ಕಥೆ ಇದಾಗಿದ್ದು, ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್ ಗಳಲ್ಲಿ ಪ್ರೀಮಿಯರ್ ಶೋ ಮಾಡಿದೆ.

ಸಂತೋಷ್ ಚಿತ್ರಂಮದಿರ ಸೇರಿದಂತೆ ರಾಜ್ಯದ ಹಲವು ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ, ಓವರ್‌ಸೀಸ್‌ನಲ್ಲಿ 350 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಜಯಾನಂದ ಆರ್ಭಟ ಶುರುವಾಗಿದೆ.

ಈ ಮೊದಲು ‘ಟ್ರಂಕ್’ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ವಿಆರ್​ಎಲ್ ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ ವಿಜಯಾನಂದ ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕರುನಾಡಿನ ಯಶಸ್ವಿ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನದ ವಿವರಗಳನ್ನು ಇಟ್ಟುಕೊಂಡು ‘ವಿಜಯಾನಂದ’ ಸಿನಿಮಾ ಮೂಡಿಬಂದಿದೆ. ನಿಹಾಲ್​, ಸಿರಿ ಪ್ರಹ್ಲಾದ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಶಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘ನಾನೇ ನರರಾಕ್ಷಸ’, ‘ಸುನಾಮಿ 143’, ‘ಪ್ರಾಯಶಃ’, ‘ಪಂಖುರಿ’, ‘ಮೈಸೂರು ಡೈರೀಸ್​’, ‘ಕ್ಷೇಮಗಿರಿಯಲ್ಲಿ ಕರ್ನಾಟಕ’, ‘ದ್ವಿಪಾತ್ರ’, ‘ಡಾ. 56’ ಸಿನಿಮಾಗಳು ಕೂಡ ಈ ವಾರ ತೆರೆಕಾಣುತ್ತಿವೆ. ಯಾವುದನ್ನು ನೋಡೋದು, ಯಾವುದನ್ನು ಬಿಡೋದು ಎಂಬ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ.

ಚಿತ್ರದಲ್ಲಿ ಪ್ರತಿಭಾವಂತ ಕಲಾವಿದರುಗಳಾದ ಅನಂತ್ ನಾಗ್, , ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ರಮೇಶ್ ಭಟ್ , ಶೈನ್ ಶೆಟ್ಟಿ, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್ ದಯಾಳ್ ಪದ್ಮನಾಭನ್, ಮುಂತಾದವರು ಇದ್ದಾರೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago