ಚಿತ್ರ ಮಂಜರಿ

ಕನ್ನಡದ ಮೊದಲ ಜೀವನ ಆಧಾರಿತ ಸಿನಿಮಾ ವಿಜಯಾನಂದ ಭರ್ಜರಿ ಪ್ರದರ್ಶನ

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಸಂತೋಷ್ ಥಿಯೇಟರ್ ನಲ್ಲಿ ತಲೆ ಎತ್ತಿದ ದೊಡ್ಡ ಕಟೌಟ್ ತಲೆ ಎತ್ತಿದೆ. ಯಶಸ್ವಿ ಉಧ್ಯಮಿಯ ಜೀವನ ಹೋರಾಟದ ಕಥೆ ಇದಾಗಿದ್ದು, ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್ ಗಳಲ್ಲಿ ಪ್ರೀಮಿಯರ್ ಶೋ ಮಾಡಿದೆ.

ಸಂತೋಷ್ ಚಿತ್ರಂಮದಿರ ಸೇರಿದಂತೆ ರಾಜ್ಯದ ಹಲವು ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ, ಓವರ್‌ಸೀಸ್‌ನಲ್ಲಿ 350 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಜಯಾನಂದ ಆರ್ಭಟ ಶುರುವಾಗಿದೆ.

ಈ ಮೊದಲು ‘ಟ್ರಂಕ್’ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ವಿಆರ್​ಎಲ್ ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ ವಿಜಯಾನಂದ ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕರುನಾಡಿನ ಯಶಸ್ವಿ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನದ ವಿವರಗಳನ್ನು ಇಟ್ಟುಕೊಂಡು ‘ವಿಜಯಾನಂದ’ ಸಿನಿಮಾ ಮೂಡಿಬಂದಿದೆ. ನಿಹಾಲ್​, ಸಿರಿ ಪ್ರಹ್ಲಾದ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಶಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘ನಾನೇ ನರರಾಕ್ಷಸ’, ‘ಸುನಾಮಿ 143’, ‘ಪ್ರಾಯಶಃ’, ‘ಪಂಖುರಿ’, ‘ಮೈಸೂರು ಡೈರೀಸ್​’, ‘ಕ್ಷೇಮಗಿರಿಯಲ್ಲಿ ಕರ್ನಾಟಕ’, ‘ದ್ವಿಪಾತ್ರ’, ‘ಡಾ. 56’ ಸಿನಿಮಾಗಳು ಕೂಡ ಈ ವಾರ ತೆರೆಕಾಣುತ್ತಿವೆ. ಯಾವುದನ್ನು ನೋಡೋದು, ಯಾವುದನ್ನು ಬಿಡೋದು ಎಂಬ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ.

ಚಿತ್ರದಲ್ಲಿ ಪ್ರತಿಭಾವಂತ ಕಲಾವಿದರುಗಳಾದ ಅನಂತ್ ನಾಗ್, , ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ರಮೇಶ್ ಭಟ್ , ಶೈನ್ ಶೆಟ್ಟಿ, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್ ದಯಾಳ್ ಪದ್ಮನಾಭನ್, ಮುಂತಾದವರು ಇದ್ದಾರೆ.

andolana

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago