ಚಿತ್ರ ಮಂಜರಿ

ʼಕಾಂತಾರʼ ಪ್ರದರ್ಶನಕ್ಕೆ ತಡೆಹಾಕಿ : ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ

ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ
ಮಂಗಳೂರು
: ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ ಸಮುದಾಯ ಮತ್ತು ಮಹಿಳೆಯರನ್ನು ಅವಹೇಳನ ಕಾರಿಯಾಗಿ ಬಿಂಬಿಸಲಾಗಿದೆ ಎಂದು  ಸಮತಾ ಸೈನಿಕ ದಳ ಮಂಗಳೂರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡಿಕೊಂಡಿದೆ.

ಈ ಸಂಬಂಧ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಮತಾ ಸೈನಿಕ ದಳ, ‘ಇದೊಂದು ಉತ್ತಮ ಸಿನಿಮಾ ಮತ್ತು ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ. ಆದರೆ, ಈ ಸಿನಿಮಾದಲ್ಲಿ ಕೆಲವು ತಪ್ಪುಗಳು ಆಗಿವೆ. ಅವುಗಳನ್ನು ಸರಿಪಡಿಸಿಕೊಳ್ಳಬೇಕು. ಮಹಿಳೆಯರನ್ನು ಅವಮಾನಿಸಲಾಗಿದೆ, ಯುವಕರನ್ನು ಪೋಲಿಗಳು ಎನ್ನುವಂತೆ ತೋರಿಸಲಾಗಿದೆ. ದಲಿತ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ದೈವರಾಧಾನೆ ಹೆಸರಿನಲ್ಲಿ ಹಿಂಸೆಯನ್ನೂ ಪ್ರಚೋದಿಸಲಾಗಿದೆ’ ಎಂದು ಆರೋಪವನ್ನು ಮಾಡಲಾಗಿದೆ.

andolanait

Recent Posts

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…

28 mins ago

ಹೊಸ ವರ್ಷಾಚರಣೆ: ಮೈಸೂರಿನಲ್ಲಿ ಅಬಕಾರಿ ಪೊಲೀಸರ ಅಲರ್ಟ್

ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…

47 mins ago

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…

1 hour ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

2 hours ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

4 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

4 hours ago