ಚಿತ್ರ ಮಂಜರಿ

ಕಾಂತಾರ-೧ ಮಹೋರ್ತ ನೆರವೇರಿಸಿದ ಚಿತ್ರತಂಡ: ಸಂಚಲ ಮೂಡಿಸುತ್ತಿರುವ ಫಸ್ಟ್‌ ಲುಕ್‌

ಬೇಂಗಳೂರು: ಕಾಂತಾರ ಚಿತ್ರ ಕನ್ನಡಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಮೂಡಿಸಿತ್ತು. ಭಾರತ ದೇಶದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಚಿತ್ರ ಪ್ರೇಮಿಗಳನ್ನು ಆಕರ್ಷಿಸಿತ್ತು. ಇದೀಗ ಕಾಂತಾರ ಚಿತ್ರದ ಪ್ರೀಕ್ವೆಲ್‌ ಚಾಪ್ಟರ್‌-೧ ಟೀಸರ್‌ ಪೋಸ್ಟರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ಇಂದು ಬೆಳಿಗ್ಗೆ ಕುಂದಾಪುರದ ಆನೆಗುಡ್ಡದ ಗಣಪತಿ ದೇವಸ್ಥಾನದಲ್ಲಿ ಚಿತ್ರತಂಡ ಚಿತ್ರದ ಮಹೋರ್ತ ಕಾರ್ಯವನ್ನು ನೆರವೇರಿಸಿದೆ. ಪೂಜೆ ಬಳಿಕೆ ಮಾಧ್ಯಮದೊಂದಿಗೆ ಮಾತನಾಡಿದ ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ, ಚಿತ್ರದ ಚಿತ್ರೀಕರಣವನ್ನು ಡಿಸೆಂಬರ್‌ನಲ್ಲಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ.

ಕಾಂತಾರದ ಅಧ್ಯಾಯ ಒಂದು ಪ್ರಾರಂಭ ಮಾಡಿದ್ದೇವೆ. ಈ ಹಿಂದೆ ಕಾಂತಾರ ಚಿತ್ರಕ್ಕೆ ಕನ್ನಡದ ಜನತೆ ನೀಡಿದ ಬೆಂಬಲ ಪ್ರೋತ್ಸಾಹವನ್ನು ಕಾಂತಾರ-೧ ಚಿತ್ರಕ್ಕೂ ನೀಡಿ ಎಂದರು. ಕಾಂತಾರ ಚಿತ್ರಕ್ಕೆ ಸಿಕ್ಕ ಯಶಸನ್ನು ಜವಬ್ಧಾರಿಯಾಗಿ ಸ್ವೀಕರಿಸೆದ್ದೇವೆ. ಈ ಮೂಲಕ ಮತ್ತಷಟು ಒಳ್ಳೆಯ ಕೆಲಸಗಳನ್ನು ಮಾಡಲು ಮುಂದಾಗಿದ್ದೇವೆ ಎಂದು ರಿಷಬ್‌ ಶೆಟ್ಟಿ ತಿಳಿಸಿದರು.

ಕಾಂತಾರ-೧ಬಗ್ಗೆ ಮಾತನಾಡಿದ ರಿಷಬ್‌ ಶೆಟ್ಟಿ, ಚಿತ್ರದ ಬಗ್ಗೆ ನಾನೇನು ಹೇಳುವುದಿಲ್ಲ, ಚಿತ್ರವೇ ಮಾತನಾಡಬೇಕು. ಕರಾವಳಿ ಭಾಗಕ್ಕೆ ಸಂಬಂಧಪಟ್ಟ ಕಥೆಯಾದ್ದರಿಂದ ಹೆಚ್ಚಾಗಿ ಕರಾವಳಿ ಭಾಗದಲ್ಲೇ ಶೂಟಿ ಮಾಡಲು ನಿರ್ಧರ ಮಾಡಿದ್ದೇವೆ. ಚಿತ್ರದಲ್ಲಿ ಹೊಸಬರಿಗೆ ಆಧ್ಯತೆ ನೀಡಲಾಗಿದ್ದು ಕನ್ನಡಿಗರಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸುತ್ತಿರುವ ಚಿತ್ರದ ಫಸ್ಟ್‌ ಲುಕ್‌:  ಇನ್ನು ಕಾಂತಾರ-೧ನ ಫಸ್ಟ್‌ ಲುಕ್‌ ಕೂಡ ಇಂದು ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸುತ್ತಿದೆ. ಯೂಟ್ಯೂಬ್‌ನಲ್ಲಿ ಫಸ್ಟ್‌ ಲುಕ್‌ ಬಿಡುಗಡೆಯಾಗಿ ಕೇಲವು ಗಂಟೆಗೆ ೩ ಲಕ್ಷಕ್ಕು ಹೆಚ್ಚು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದು ಸುಮಾರು ೨೧.೫ಲಕ್ಷ ಮಂದಿ ವಿಕ್ಷಣೆ ಮಾಡಿದ್ದಾರೆ, ಈ ಮೂಲ ಈ ಹಿಂದಿನ ಚಿತ್ರಗಳ ದಾಖಲೆಗಳನ್ನು ಮುರಿಯುವತ್ತ ಸಾಗಿದೆ.

andolanait

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

7 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

8 hours ago