ಚಿತ್ರ ಮಂಜರಿ

ನವೆಂಬರ್ 27 ಕ್ಕೆ ಫಿಕ್ಸ್ ಆಯ್ತು ಕಾಂತಾರ 2 ಮುಹೂರ್ತ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಭರ್ಜರಿ ಯಶಸ್ಸನ್ನ ಕಂಡಿದ್ದು, ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು.

ಕಾಂತಾರ 1 ನೋಡಿ ಥ್ರಿಲ್ ಆಗಿದ್ದ ಸಿನಿ ರಸಿಕರು ಕಾಂತಾರ 2 ಗಾಗಿ ಕಾದು ಕುಳಿತಿದ್ದಾರೆ. ಹೀಗಿರುವಾಗ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಸುತ್ತಿರುವ, ಕಾಂತಾರ 2 ಸಿನಿಮಾ ಮುಹೂರ್ತ ಇದೆ ತಿಂಗಳ 27ಕ್ಕೆ ನಿಗದಿಯಾಗಿದೆ.

ಕಾಂತಾರ ಮೊದಲ ಭಾಗದಂತೆ ಎರಡನೇ ಭಾಗವು ಕೂಡ ಯಶಸ್ಸನ್ನು ಕಾಣಬೇಕೆಂದು ರಿಷಬ್ ಶೆಟ್ಟಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ತಮ್ಮ ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ.

ಇತ್ತೀಚಿಗಷ್ಟೇ ಕುಟುಂಬಸ್ಥರೊಂದಿಗೆ ದೀಪಾವಳಿ ಆಚರಿಸಿದ್ದ ರಿಶಬ್ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲಿ ಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ರಿಷಬ್ ಶೆಟ್ಟಿ ಎಂದಿನಂತೆ ಕಾಣಿಸಿರಲಿಲ್ಲ. ಬದಲಾಗಿ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಕಾಂತಾರ 2ಗಾಗಿ ರಿಷಬ್ ತಮ್ಮ ಗೆಟಪ್ ಬದಲಿಸಿಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು.

ಇದೀಗ ಅಭಿಮಾನಿಗಳ ಮಾತು ಸತ್ಯವಾಗಿದೆ. ಕಾಂತಾರ 2 ನಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ಹೊರಬರಲಿದೆ.

ಕರ್ನಾಟಕ ರಾಜ್ಯದ ಪ್ರಾದೇಶಿಕ ದೈವಾಚರಣೆಯ ಕುರಿತಾದ ಕಾಂತರಾ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಗೆದ್ದು ಬೀಗಿತ್ತು. ಈ ಮೂಲಕ ರಿಕ್ಷಬ್ ಶೆಟ್ಟಿ ಅವರು ಯಶಸ್ಸಿನ ಉತ್ತುಂಗಕ್ಕೇರಿದರು. ಅದಷ್ಟೇ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

lokesh

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

3 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

20 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

33 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago