ಚಿತ್ರ ಮಂಜರಿ

ನವೆಂಬರ್ 27 ಕ್ಕೆ ಫಿಕ್ಸ್ ಆಯ್ತು ಕಾಂತಾರ 2 ಮುಹೂರ್ತ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಭರ್ಜರಿ ಯಶಸ್ಸನ್ನ ಕಂಡಿದ್ದು, ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು.

ಕಾಂತಾರ 1 ನೋಡಿ ಥ್ರಿಲ್ ಆಗಿದ್ದ ಸಿನಿ ರಸಿಕರು ಕಾಂತಾರ 2 ಗಾಗಿ ಕಾದು ಕುಳಿತಿದ್ದಾರೆ. ಹೀಗಿರುವಾಗ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಸುತ್ತಿರುವ, ಕಾಂತಾರ 2 ಸಿನಿಮಾ ಮುಹೂರ್ತ ಇದೆ ತಿಂಗಳ 27ಕ್ಕೆ ನಿಗದಿಯಾಗಿದೆ.

ಕಾಂತಾರ ಮೊದಲ ಭಾಗದಂತೆ ಎರಡನೇ ಭಾಗವು ಕೂಡ ಯಶಸ್ಸನ್ನು ಕಾಣಬೇಕೆಂದು ರಿಷಬ್ ಶೆಟ್ಟಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ತಮ್ಮ ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ.

ಇತ್ತೀಚಿಗಷ್ಟೇ ಕುಟುಂಬಸ್ಥರೊಂದಿಗೆ ದೀಪಾವಳಿ ಆಚರಿಸಿದ್ದ ರಿಶಬ್ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲಿ ಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ರಿಷಬ್ ಶೆಟ್ಟಿ ಎಂದಿನಂತೆ ಕಾಣಿಸಿರಲಿಲ್ಲ. ಬದಲಾಗಿ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಕಾಂತಾರ 2ಗಾಗಿ ರಿಷಬ್ ತಮ್ಮ ಗೆಟಪ್ ಬದಲಿಸಿಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು.

ಇದೀಗ ಅಭಿಮಾನಿಗಳ ಮಾತು ಸತ್ಯವಾಗಿದೆ. ಕಾಂತಾರ 2 ನಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ಹೊರಬರಲಿದೆ.

ಕರ್ನಾಟಕ ರಾಜ್ಯದ ಪ್ರಾದೇಶಿಕ ದೈವಾಚರಣೆಯ ಕುರಿತಾದ ಕಾಂತರಾ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಗೆದ್ದು ಬೀಗಿತ್ತು. ಈ ಮೂಲಕ ರಿಕ್ಷಬ್ ಶೆಟ್ಟಿ ಅವರು ಯಶಸ್ಸಿನ ಉತ್ತುಂಗಕ್ಕೇರಿದರು. ಅದಷ್ಟೇ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago