ಚಿತ್ರ ಮಂಜರಿ

ʼಕಾಂತಾರʼ ನೋಡಿ ತುಂಬಾ ಕಲಿತೆ : ಹೃತಿಕ್ ರೋಷನ್

ಬೆಂಗಳೂರು :  ಕನ್ನಡದಲ್ಲಿ ಇತೀಚಿಗೆ ಮನೆಮಾತಾದ ಚಿತ್ರ `ಕಾಂತಾರ’ ಸಿನಿಮಾವನ್ನು ಬಾಲಿವುಡ್ ಸೂಪರ್ ಸ್ಟಾರ್  ಹೃತಿಕ್ ರೋಷನ್‌ ಅವರು ಹಾಡಿ ಹೊಗಳಿದ್ದಾರೆ.
ಹೌದು, ಈ ಬಗ್ಗೆ ಟ್ವೀಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು `ಕಾಂತಾರ’ ಕ್ಲೈಮ್ಯಾಕ್ಸ್ ಸಖತ್ ಇಷ್ಟವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಷಬ್ ನಟನೆ, ನಿರ್ದೇಶನದ `ಕಾಂತಾರ’ ಸಿನಿಮಾ ಹವಾ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಒಟಿಟಿಯಲ್ಲಿ ಕೂಡ ಸಿನಿಮಾ ಸಂಚಲನ ಮೂಡಿಸುತ್ತಿದೆ. ಇದೀಗ `ಕಾಂತಾರ’ ಚಿತ್ರವನ್ನು ಬಿಟೌನ್ ಸ್ಟಾರ್ ಹೃತಿಕ್ ರೋಷನ್ ನೋಡಿ ಭೇಷ್ ಎಂದಿದ್ದಾರೆ. ಸಿನಿಮಾ ಬಗೆಗಿನ ಭಾವನೆಯನ್ನ ನಟ ಖುಷಿಯಿಂದ ಹೇಳಿಕೊಂಡಿದ್ದಾರೆ.

ಕಾಂತಾರ’ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್‌ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಿಷಬ್ ತಂಡದ ವಿಭಿನ್ನ ಪ್ರಯತ್ನವನ್ನ ಹಾಡಿ ಹೊಗಳಿದ್ದಾರೆ. ಹೃತಿಕ್‌ ರೋಷನ್‌ಗೆ ಪ್ರತಿಯುತ್ತರವಾಗಿ ರಿಷಬ್ ಕೂಡ ಧನ್ಯವಾದಗಳು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago