ಚಿತ್ರ ಮಂಜರಿ

‘ಫ್ರಂಟ್‌ಲೈನ್‌’ ಮುಖಪುಟದಲ್ಲಿ ಕಾಂತಾರ ಕಲರವ

ಮೈಸೂರು: ಕನ್ನಡ ಮಣ್ಣಿನ ಕಲಾವಿದರಿಂದ ಮೂಡಿಬಂದ ಕಾಂತಾರ ಸಿನಿಮಾ 50 ದಿನಗಳು ಪೂರೈಸಿ ದೇಶಾದ್ಯಂತ ಅಬ್ಬರದಿಂದ ಮುನ್ನಡೆದಿದೆ. ರಿಷಬ್‌ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ, ತಂಡದ ಕಲಾವಿದರಿಗೆ ಅಚ್ಚರಿಯಾಗುವಂತೆ ದೇಶದ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಿದೆ.

ಗಳಿಕೆಯಲ್ಲಿ ಮತ್ತು ಪ್ರದರ್ಶನದಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಿತ್ರ ಈಗ ಭಾರತದ ಯಾವ ಚಿತ್ರವೂ ಮಾಡದ ದಾಖಲೆಯೊಂದನ್ನು ಮಾಡಿದೆ. ” ದಿ ಹಿಂದೂʼ ಪತ್ರಿಕಾ ಸಮೂಹದ ಫ್ರಂಟ್‌ ಲೈನ್‌ ನಿಯತಕಾಲಿಕದ ನವೆಂಬರ್‌ ತಿಂಗಳ ಸಂಚಿಕೆಗೆ ಕಾಂತಾರ ಯಶಸ್ಸಿನ ಕಥೆಯನ್ನು ಕವರ್‌ ಸ್ಟೋರಿಯಾಗಿ ಬಳಸಿಕೊಳ್ಳಲಾಗಿದೆ. 1984ರಲ್ಲಿ ಪ್ರಾರಂಭವಾದ ಫ್ರಂಟ್‌ ಲೈನ್‌ ನಿಯತಕಾಲಿಕ ತನ್ನ 38 ವರ್ಷಗಳ ಕಾರ್ಯಾವಧಿಯಲ್ಲಿ ಯಾವುದೇ ಸಿನಿಮಾ ಸಂಬಂಧಿತ ಸುದ್ದಿಗಳನ್ನು ಇಲ್ಲವೇ ಫೋಟೋಗಳನ್ನು ತನ್ನ ಮುಖಪುಟಕ್ಕೆ ಬಳಸಿಕೊಂಡ ನಿದರ್ಶನವಿಲ್ಲ. ಹಾಗಾಗಿ ಇದು ಇಡೀ ಚಿತ್ರರಂಗಕ್ಕೆ ಹಾಗೆಯೇ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

The Kantara Phenomenon – Understanding the extraordinary success of an ordinary film (ಕಾಂತಾರ ವಿದ್ಯಮಾನ-ಸಾಮಾನ್ಯ ಚಿತ್ರದ ಅಸಾಮಾನ್ಯ ಯಶಸ್ಸನ್ನು ಅರ್ಥಮಾಡಿಕೊಳ್ಳುವುದು) ಎಂಬ ಶೀರ್ಷಿಕೆಯಲ್ಲಿ ಬರೆದಿರುವ ಲೇಖನದಲ್ಲಿ ಕಾಂತಾರದ ಚಿತ್ರದ ಯಶಸ್ಸಿಗೆ ಕಾರಣವಾದ ಅಂಶಗಳನ್ನು ವಿಶ್ಲೇಷಿಸಲಾಗಿದೆ.

ಕನ್ನಡ ಸಿನಿಮಾ ಕ್ಷೇತ್ರವನ್ನು ರಾಷ್ಟ್ರ ಮಟ್ಟಕ್ಕೆ ಒಯ್ದ ಚಿತ್ರಗಳ ಸಾಲಿಗೆ ಕಾಂತಾರವೂ ಸೇರುತ್ತದೆ. ಯಾವುದೇ ಪೂರ್ವ ತಯಾರಿಯಿಲ್ಲದೆ ಪ್ಯಾನ್‌ ಇಂಡಿಯಾ ಸಿನಿಮಾಗಳ ಗುಂಪಿಗೆ ಸೇರಿದ ಕಾಂತಾರ ಚಿತ್ರವನ್ನು ಭಾಷೆಯ ಹಂಗನ್ನು ಮೀರಿ ಇಡೀ ದೇಶದ ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ.

ಸ್ಟಾರ್‌ ನಟರಿಲ್ಲದ, ಗ್ರಾಫಿಕ್ಸ್‌ ಗಳ ಮಿಶ್ರಣವಿಲ್ಲದ ಚಿತ್ರವೊಂದು ಕೇವಲ ತನ್ನ ಕಥೆ ಮತ್ತು ಅದಕ್ಕೆ ಪೂರಕವಾದ ಸನ್ನಿವೇಶಗಳನ್ನು ಬಳಸಿಕೊಂಡು ಸುಂದರ ದೃಶ್ಯಕಾವ್ಯವನ್ನು ಕಟ್ಟಿಕೊಟ್ಟ ಬಗೆಯನ್ನು ಲೇಖನದಲ್ಲಿ ವಿಶ್ಲೇಷಿಸಲಾಗಿದೆ.

andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

12 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

12 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

13 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

13 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

13 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

14 hours ago