ಮೈಸೂರು: ಕನ್ನಡ ಮಣ್ಣಿನ ಕಲಾವಿದರಿಂದ ಮೂಡಿಬಂದ ಕಾಂತಾರ ಸಿನಿಮಾ 50 ದಿನಗಳು ಪೂರೈಸಿ ದೇಶಾದ್ಯಂತ ಅಬ್ಬರದಿಂದ ಮುನ್ನಡೆದಿದೆ. ರಿಷಬ್ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ, ತಂಡದ ಕಲಾವಿದರಿಗೆ ಅಚ್ಚರಿಯಾಗುವಂತೆ ದೇಶದ ಮೂಲೆ ಮೂಲೆಯಲ್ಲೂ ಸದ್ದು ಮಾಡುತ್ತಿದೆ.
ಗಳಿಕೆಯಲ್ಲಿ ಮತ್ತು ಪ್ರದರ್ಶನದಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಿತ್ರ ಈಗ ಭಾರತದ ಯಾವ ಚಿತ್ರವೂ ಮಾಡದ ದಾಖಲೆಯೊಂದನ್ನು ಮಾಡಿದೆ. ” ದಿ ಹಿಂದೂʼ ಪತ್ರಿಕಾ ಸಮೂಹದ ಫ್ರಂಟ್ ಲೈನ್ ನಿಯತಕಾಲಿಕದ ನವೆಂಬರ್ ತಿಂಗಳ ಸಂಚಿಕೆಗೆ ಕಾಂತಾರ ಯಶಸ್ಸಿನ ಕಥೆಯನ್ನು ಕವರ್ ಸ್ಟೋರಿಯಾಗಿ ಬಳಸಿಕೊಳ್ಳಲಾಗಿದೆ. 1984ರಲ್ಲಿ ಪ್ರಾರಂಭವಾದ ಫ್ರಂಟ್ ಲೈನ್ ನಿಯತಕಾಲಿಕ ತನ್ನ 38 ವರ್ಷಗಳ ಕಾರ್ಯಾವಧಿಯಲ್ಲಿ ಯಾವುದೇ ಸಿನಿಮಾ ಸಂಬಂಧಿತ ಸುದ್ದಿಗಳನ್ನು ಇಲ್ಲವೇ ಫೋಟೋಗಳನ್ನು ತನ್ನ ಮುಖಪುಟಕ್ಕೆ ಬಳಸಿಕೊಂಡ ನಿದರ್ಶನವಿಲ್ಲ. ಹಾಗಾಗಿ ಇದು ಇಡೀ ಚಿತ್ರರಂಗಕ್ಕೆ ಹಾಗೆಯೇ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.
The Kantara Phenomenon – Understanding the extraordinary success of an ordinary film (ಕಾಂತಾರ ವಿದ್ಯಮಾನ-ಸಾಮಾನ್ಯ ಚಿತ್ರದ ಅಸಾಮಾನ್ಯ ಯಶಸ್ಸನ್ನು ಅರ್ಥಮಾಡಿಕೊಳ್ಳುವುದು) ಎಂಬ ಶೀರ್ಷಿಕೆಯಲ್ಲಿ ಬರೆದಿರುವ ಲೇಖನದಲ್ಲಿ ಕಾಂತಾರದ ಚಿತ್ರದ ಯಶಸ್ಸಿಗೆ ಕಾರಣವಾದ ಅಂಶಗಳನ್ನು ವಿಶ್ಲೇಷಿಸಲಾಗಿದೆ.
ಕನ್ನಡ ಸಿನಿಮಾ ಕ್ಷೇತ್ರವನ್ನು ರಾಷ್ಟ್ರ ಮಟ್ಟಕ್ಕೆ ಒಯ್ದ ಚಿತ್ರಗಳ ಸಾಲಿಗೆ ಕಾಂತಾರವೂ ಸೇರುತ್ತದೆ. ಯಾವುದೇ ಪೂರ್ವ ತಯಾರಿಯಿಲ್ಲದೆ ಪ್ಯಾನ್ ಇಂಡಿಯಾ ಸಿನಿಮಾಗಳ ಗುಂಪಿಗೆ ಸೇರಿದ ಕಾಂತಾರ ಚಿತ್ರವನ್ನು ಭಾಷೆಯ ಹಂಗನ್ನು ಮೀರಿ ಇಡೀ ದೇಶದ ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ.
ಸ್ಟಾರ್ ನಟರಿಲ್ಲದ, ಗ್ರಾಫಿಕ್ಸ್ ಗಳ ಮಿಶ್ರಣವಿಲ್ಲದ ಚಿತ್ರವೊಂದು ಕೇವಲ ತನ್ನ ಕಥೆ ಮತ್ತು ಅದಕ್ಕೆ ಪೂರಕವಾದ ಸನ್ನಿವೇಶಗಳನ್ನು ಬಳಸಿಕೊಂಡು ಸುಂದರ ದೃಶ್ಯಕಾವ್ಯವನ್ನು ಕಟ್ಟಿಕೊಟ್ಟ ಬಗೆಯನ್ನು ಲೇಖನದಲ್ಲಿ ವಿಶ್ಲೇಷಿಸಲಾಗಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…