ಚಿತ್ರ ಮಂಜರಿ

ಕೆಜಿಎಫ್‌-2 ಹಿಂದಿಕ್ಕಿದ ಕಾಂತಾರ : ಭಾರತದಲ್ಲೇ ಅತಿ ಹಚ್ಚು ರೇಟಿಂಗ್‌ ಪಡೆದ ಹೆಗ್ಗಳಿಕೆ

ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ರಿಷಬ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಿಷಬ್ ಶೆಟ್ಟಿಗೆ ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತರಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದೆ.

ರಿಷಬ್ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ. ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ.  IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ.  IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.

ಕರಾವಳಿಯ ಸಂಸ್ಕೃತಿ, ಆಚಾರ-ವಿಚಾರವನ್ನು ಕಾಂತಾರ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ರಿಷಬ್. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಜೊತೆಗೆ ದೈವಾರಾಧನೆ, ಭೂತಕೋಲ ಆಚರಣೆ ಕಾಂತಾರದ ಹೈಲೆಟ್. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಸಹ ಪಾತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago