ಸ್ಯಾಂಡಲ್ವುಡ್ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ರಿಷಬ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಿಷಬ್ ಶೆಟ್ಟಿಗೆ ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತರಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದೆ.
ರಿಷಬ್ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ. ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ. IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ. IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.
ಕರಾವಳಿಯ ಸಂಸ್ಕೃತಿ, ಆಚಾರ-ವಿಚಾರವನ್ನು ಕಾಂತಾರ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ರಿಷಬ್. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಜೊತೆಗೆ ದೈವಾರಾಧನೆ, ಭೂತಕೋಲ ಆಚರಣೆ ಕಾಂತಾರದ ಹೈಲೆಟ್. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಸಹ ಪಾತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…