ಚಿತ್ರ ಮಂಜರಿ

ಕೆಜಿಎಫ್‌-2 ಹಿಂದಿಕ್ಕಿದ ಕಾಂತಾರ : ಭಾರತದಲ್ಲೇ ಅತಿ ಹಚ್ಚು ರೇಟಿಂಗ್‌ ಪಡೆದ ಹೆಗ್ಗಳಿಕೆ

ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ರಿಷಬ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಿಷಬ್ ಶೆಟ್ಟಿಗೆ ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತರಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದೆ.

ರಿಷಬ್ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ. ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ.  IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ.  IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.

ಕರಾವಳಿಯ ಸಂಸ್ಕೃತಿ, ಆಚಾರ-ವಿಚಾರವನ್ನು ಕಾಂತಾರ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ರಿಷಬ್. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಜೊತೆಗೆ ದೈವಾರಾಧನೆ, ಭೂತಕೋಲ ಆಚರಣೆ ಕಾಂತಾರದ ಹೈಲೆಟ್. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಸಹ ಪಾತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.

andolana

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago