ಚಿತ್ರ ಮಂಜರಿ

ಕೆಜಿಎಫ್‌-2 ಹಿಂದಿಕ್ಕಿದ ಕಾಂತಾರ : ಭಾರತದಲ್ಲೇ ಅತಿ ಹಚ್ಚು ರೇಟಿಂಗ್‌ ಪಡೆದ ಹೆಗ್ಗಳಿಕೆ

ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ರಿಷಬ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಿಷಬ್ ಶೆಟ್ಟಿಗೆ ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತರಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದೆ.

ರಿಷಬ್ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ. ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ.  IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ.  IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.

ಕರಾವಳಿಯ ಸಂಸ್ಕೃತಿ, ಆಚಾರ-ವಿಚಾರವನ್ನು ಕಾಂತಾರ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ರಿಷಬ್. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಜೊತೆಗೆ ದೈವಾರಾಧನೆ, ಭೂತಕೋಲ ಆಚರಣೆ ಕಾಂತಾರದ ಹೈಲೆಟ್. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಸಹ ಪಾತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.

andolana

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

4 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

5 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

6 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

7 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

8 hours ago