ಈ ತಿಂಗಳಾಂತ್ಯಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾ ಕಾಂತಾರ 1 ಪ್ರೀಕ್ವೆಲ್ ನ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.
ಇದೇ ನವೆಂಬರ್ 27 ರಂದು ಮಧ್ಯಾಹ್ನ 12 – 25ಕ್ಕೆ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
ತುಳುನಾಡಿನ ಸಂಪ್ರದಾಯ ಹಾಗೂ ದೈವಾಚರಣೆ ಕುರಿತಾದ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಗೆದ್ದು ಬೀಗಿತ್ತು. ಹೊಂಬಾಳೆ ಫೀಲ್ಮ್ಸ್ ಕಾಂತಾರ ಬಳಿಕ ಬಾಕ್ಸ್ ಆಫೀಸ್ ನಲ್ಲಿ 400 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು.
ಕಾಂತಾರ ಪಾರ್ಟ್ 1 ಸಕ್ಸಸ್ ಕಂಡ ಬಳಿಕ ಎರಡನೇ ಭಾಗವೂ ಕೂಡ ಸಿನಿರಸಿಕರ ಮುಂದೆ ಬರಲಿದೆ ಎಂದು ರಿಶಬ್ ಶೆಟ್ಟಿ ಅವರು ಸಿನಿಮಾದ ಶತದಿನ ಸಂಭ್ರಮದ ವೇಳೆ ಹೇಳಿದ್ದರು. ಅದಾದ ನಂತರ ಸ್ಕ್ರಿಪ್ಟ್ ಹಾಗೂ ಲೋಕೇಶನ್ ಹುಡುಕಾಟ ಪೂರ್ಣಗೊಳಿಸಿ, ಸಿನಿಮಾ ಕುರಿತು ಒಂದೊಂದೇ ಅಪ್ಡೇಟ್ ನೀಡುತ್ತಾ ಬಂದಿದ್ದರು. ಇದೀಗ ಚಿತ್ರತಂಡ ಇದೇ ತಿಂಗಳ 27 ರಂದು ಪ್ರೀಕ್ವೆಲ್ ನ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದು ಸಿನಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಪ್ರಿಕ್ವೆಲ್ ನಲ್ಲಿ ಪಂಜುರ್ಲಿ ದೈವದ ಹುಟ್ಟು ಹಾಗೂ ಮೂಲದ ಕುರಿತ ಕಥೆ ಇದೆ ಎನ್ನಲಾಗಿದೆ. ಈ ತಿಂಗಳ ಕೊನೆಯಲ್ಲಿ ಉಡುಪಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ ಎನ್ನಲಾಗುತ್ತಿದೆ.
ಕಾಂತಾರ ಮೊದಲ ಭಾಗದಂತೆ ಎರಡನೇ ಭಾಗವು ಕೂಡ ಯಶಸ್ಸನ್ನು ಕಾಣಬೇಕೆಂದು ರಿಷಬ್ ಶೆಟ್ಟಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ತಮ್ಮ ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೇ ಕುಟುಂಬಸ್ಥರೊಂದಿಗೆ ದೀಪಾವಳಿ ಆಚರಿಸಿದ್ದ ರಿಶಬ್ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲಿ ಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ರಿಷಬ್ ಶೆಟ್ಟಿ ಎಂದಿನಂತೆ ಕಾಣಿಸಿರಲಿಲ್ಲ. ಬದಲಾಗಿ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಕಾಂತಾರ 2ಗಾಗಿ ರಿಷಬ್ ತಮ್ಮ ಗೆಟಪ್ ಬದಲಿಸಿಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು.
ಇದೀಗ ಅಭಿಮಾನಿಗಳ ಮಾತು ಸತ್ಯವಾಗಿದೆ. ಕಾಂತಾರ 2 ನಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ಹೊರಬರಲಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…