ಈ ತಿಂಗಳಾಂತ್ಯಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾ ಕಾಂತಾರ 1 ಪ್ರೀಕ್ವೆಲ್ ನ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.
ಇದೇ ನವೆಂಬರ್ 27 ರಂದು ಮಧ್ಯಾಹ್ನ 12 – 25ಕ್ಕೆ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
ತುಳುನಾಡಿನ ಸಂಪ್ರದಾಯ ಹಾಗೂ ದೈವಾಚರಣೆ ಕುರಿತಾದ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಗೆದ್ದು ಬೀಗಿತ್ತು. ಹೊಂಬಾಳೆ ಫೀಲ್ಮ್ಸ್ ಕಾಂತಾರ ಬಳಿಕ ಬಾಕ್ಸ್ ಆಫೀಸ್ ನಲ್ಲಿ 400 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು.
ಕಾಂತಾರ ಪಾರ್ಟ್ 1 ಸಕ್ಸಸ್ ಕಂಡ ಬಳಿಕ ಎರಡನೇ ಭಾಗವೂ ಕೂಡ ಸಿನಿರಸಿಕರ ಮುಂದೆ ಬರಲಿದೆ ಎಂದು ರಿಶಬ್ ಶೆಟ್ಟಿ ಅವರು ಸಿನಿಮಾದ ಶತದಿನ ಸಂಭ್ರಮದ ವೇಳೆ ಹೇಳಿದ್ದರು. ಅದಾದ ನಂತರ ಸ್ಕ್ರಿಪ್ಟ್ ಹಾಗೂ ಲೋಕೇಶನ್ ಹುಡುಕಾಟ ಪೂರ್ಣಗೊಳಿಸಿ, ಸಿನಿಮಾ ಕುರಿತು ಒಂದೊಂದೇ ಅಪ್ಡೇಟ್ ನೀಡುತ್ತಾ ಬಂದಿದ್ದರು. ಇದೀಗ ಚಿತ್ರತಂಡ ಇದೇ ತಿಂಗಳ 27 ರಂದು ಪ್ರೀಕ್ವೆಲ್ ನ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದು ಸಿನಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಪ್ರಿಕ್ವೆಲ್ ನಲ್ಲಿ ಪಂಜುರ್ಲಿ ದೈವದ ಹುಟ್ಟು ಹಾಗೂ ಮೂಲದ ಕುರಿತ ಕಥೆ ಇದೆ ಎನ್ನಲಾಗಿದೆ. ಈ ತಿಂಗಳ ಕೊನೆಯಲ್ಲಿ ಉಡುಪಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ ಎನ್ನಲಾಗುತ್ತಿದೆ.
ಕಾಂತಾರ ಮೊದಲ ಭಾಗದಂತೆ ಎರಡನೇ ಭಾಗವು ಕೂಡ ಯಶಸ್ಸನ್ನು ಕಾಣಬೇಕೆಂದು ರಿಷಬ್ ಶೆಟ್ಟಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ತಮ್ಮ ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೇ ಕುಟುಂಬಸ್ಥರೊಂದಿಗೆ ದೀಪಾವಳಿ ಆಚರಿಸಿದ್ದ ರಿಶಬ್ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲಿ ಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ರಿಷಬ್ ಶೆಟ್ಟಿ ಎಂದಿನಂತೆ ಕಾಣಿಸಿರಲಿಲ್ಲ. ಬದಲಾಗಿ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಕಾಂತಾರ 2ಗಾಗಿ ರಿಷಬ್ ತಮ್ಮ ಗೆಟಪ್ ಬದಲಿಸಿಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು.
ಇದೀಗ ಅಭಿಮಾನಿಗಳ ಮಾತು ಸತ್ಯವಾಗಿದೆ. ಕಾಂತಾರ 2 ನಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ಹೊರಬರಲಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…