ಈ ತಿಂಗಳಾಂತ್ಯಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾ ಕಾಂತಾರ 1 ಪ್ರೀಕ್ವೆಲ್ ನ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.
ಇದೇ ನವೆಂಬರ್ 27 ರಂದು ಮಧ್ಯಾಹ್ನ 12 – 25ಕ್ಕೆ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
ತುಳುನಾಡಿನ ಸಂಪ್ರದಾಯ ಹಾಗೂ ದೈವಾಚರಣೆ ಕುರಿತಾದ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಗೆದ್ದು ಬೀಗಿತ್ತು. ಹೊಂಬಾಳೆ ಫೀಲ್ಮ್ಸ್ ಕಾಂತಾರ ಬಳಿಕ ಬಾಕ್ಸ್ ಆಫೀಸ್ ನಲ್ಲಿ 400 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು.
ಕಾಂತಾರ ಪಾರ್ಟ್ 1 ಸಕ್ಸಸ್ ಕಂಡ ಬಳಿಕ ಎರಡನೇ ಭಾಗವೂ ಕೂಡ ಸಿನಿರಸಿಕರ ಮುಂದೆ ಬರಲಿದೆ ಎಂದು ರಿಶಬ್ ಶೆಟ್ಟಿ ಅವರು ಸಿನಿಮಾದ ಶತದಿನ ಸಂಭ್ರಮದ ವೇಳೆ ಹೇಳಿದ್ದರು. ಅದಾದ ನಂತರ ಸ್ಕ್ರಿಪ್ಟ್ ಹಾಗೂ ಲೋಕೇಶನ್ ಹುಡುಕಾಟ ಪೂರ್ಣಗೊಳಿಸಿ, ಸಿನಿಮಾ ಕುರಿತು ಒಂದೊಂದೇ ಅಪ್ಡೇಟ್ ನೀಡುತ್ತಾ ಬಂದಿದ್ದರು. ಇದೀಗ ಚಿತ್ರತಂಡ ಇದೇ ತಿಂಗಳ 27 ರಂದು ಪ್ರೀಕ್ವೆಲ್ ನ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದು ಸಿನಿ ಪ್ರಿಯರು ಫುಲ್ ಖುಷ್ ಆಗಿದ್ದಾರೆ.
ಪ್ರಿಕ್ವೆಲ್ ನಲ್ಲಿ ಪಂಜುರ್ಲಿ ದೈವದ ಹುಟ್ಟು ಹಾಗೂ ಮೂಲದ ಕುರಿತ ಕಥೆ ಇದೆ ಎನ್ನಲಾಗಿದೆ. ಈ ತಿಂಗಳ ಕೊನೆಯಲ್ಲಿ ಉಡುಪಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ ಎನ್ನಲಾಗುತ್ತಿದೆ.
ಕಾಂತಾರ ಮೊದಲ ಭಾಗದಂತೆ ಎರಡನೇ ಭಾಗವು ಕೂಡ ಯಶಸ್ಸನ್ನು ಕಾಣಬೇಕೆಂದು ರಿಷಬ್ ಶೆಟ್ಟಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ತಮ್ಮ ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೇ ಕುಟುಂಬಸ್ಥರೊಂದಿಗೆ ದೀಪಾವಳಿ ಆಚರಿಸಿದ್ದ ರಿಶಬ್ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲಿ ಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ರಿಷಬ್ ಶೆಟ್ಟಿ ಎಂದಿನಂತೆ ಕಾಣಿಸಿರಲಿಲ್ಲ. ಬದಲಾಗಿ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಕಾಂತಾರ 2ಗಾಗಿ ರಿಷಬ್ ತಮ್ಮ ಗೆಟಪ್ ಬದಲಿಸಿಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು.
ಇದೀಗ ಅಭಿಮಾನಿಗಳ ಮಾತು ಸತ್ಯವಾಗಿದೆ. ಕಾಂತಾರ 2 ನಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ಹೊರಬರಲಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…