ಚಿತ್ರ ಮಂಜರಿ

ಕಾಂತಾರ ಗೆಲುವು ದುಖಃವನ್ನೂ ಕೊಟ್ಟಿದೆ : ಹೀಗಂದಿದ್ಯಾಕೆ ರಿಷಬ್ ಶೆಟ್ಟಿ ?

ಕಾಂತಾರ ಸಿನಿಮಾ ಗೆಲುವು ಎಷ್ಟು ಖುಷಿ ಕೊಟ್ಟಿದೆಯೋ ಅಷ್ಟೇ ದುಖಃವನ್ನೂ ಕೊಟ್ಟಿದೆ ಎಂದು ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಬೇಸರ ಹೊಹೊರ ಹಾಕಿದ್ದಾರೆ.

ನಂದಿ ಅವಾರ್ಡ್ಸ್‌ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ ಹಾಗೂ ನಿರ್ದೇಶಕ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ರಿಷಬ್‌ ಶೆಟ್ಟಿ, ನನಗೆ ಕಾಂತಾರ ಸಿನಿಮಾದ ಗೆಲುವು ಎಷ್ಟು ಖುಷಿ ಕೊಟ್ಟಿದೆಯೋ ಅಷ್ಟೇ ನೋವನ್ನೂ ಕೂಡ ಕೊಟ್ಟಿದೆ ಎಂದಿದ್ದಾರೆ.

ದೈವಾರಾಧನೆಯ ಬಗ್ಗೆ ಕನ್ನಡ, ತುಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾಕಷ್ಟು ಸಿನಿಮಾಗಳು ಬಂದಿವೆ. ಈಗಿನ ಕಾಲಘಟ್ಟದಲ್ಲಿ ದೈವಾರಾಧನೆಯ ಶ್ರೇಷ್ಠತೆ ಹೇಳುವ ಸಲುವಾಗಿ ಈ ಸಿನಿಮಾ ಮಾಡಿದ್ದೀನಿ. ಆದರೆ ಕಾಂತಾರ ಬಳಿಕ ದೈವದ ಹಾಡಿಗೆ ತಪ್ಪಾಗಿ ರೀಲ್ಸ್‌ ಮಾಡೋದು ಜಾಸ್ತಿ ಆಗಿದೆ. ದೈವಾರಾಧನೆಗೆ ಅಪಮಾನ ಮಾಡಬೇಡಿ. ಪಂಜುರ್ಲಿ, ದೈವಾರಾಧನೆ, ಕೋಲ ನಮ್ಮ ನೆಲದ ಮೂಲ ಸಂಸ್ಕೃತಿ. ನಮ್ಮ ನೆಲದ ಕಥೆ ಹೇಳಬೇಕು ಅಂತಾ ಈ ಸಿನಿಮಾ ಮಾಡಿದ್ದೀನಿ ದಯವಿಟ್ಟು ದೈವದ ಹಾಡಿಗೆ ತಪ್ಪಾಗಿ ರೀಲ್ಸ್‌ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.

ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್‌ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.

ನವೆಂಬರ್‌ 27 ರಂದು ಕಾಂತಾರ ಚಾಪ್ಟರ್‌ ಒಂದರ ಮುಹೂರ್ತ ನೆರವೇರಿತ್ತು. ಕಾಂತಾರ ಚಿತ್ರತಂಡ ವಿಶೇಷವಾದ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿತ್ತು.

lokesh

Recent Posts

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

21 mins ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

1 hour ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

1 hour ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

3 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

3 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

3 hours ago