ಕಾಂತಾರ ಸಿನಿಮಾ ಗೆಲುವು ಎಷ್ಟು ಖುಷಿ ಕೊಟ್ಟಿದೆಯೋ ಅಷ್ಟೇ ದುಖಃವನ್ನೂ ಕೊಟ್ಟಿದೆ ಎಂದು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬೇಸರ ಹೊಹೊರ ಹಾಕಿದ್ದಾರೆ.
ನಂದಿ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಅತ್ಯುತ್ತಮ ನಟ ಹಾಗೂ ನಿರ್ದೇಶಕ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ರಿಷಬ್ ಶೆಟ್ಟಿ, ನನಗೆ ಕಾಂತಾರ ಸಿನಿಮಾದ ಗೆಲುವು ಎಷ್ಟು ಖುಷಿ ಕೊಟ್ಟಿದೆಯೋ ಅಷ್ಟೇ ನೋವನ್ನೂ ಕೂಡ ಕೊಟ್ಟಿದೆ ಎಂದಿದ್ದಾರೆ.
ದೈವಾರಾಧನೆಯ ಬಗ್ಗೆ ಕನ್ನಡ, ತುಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸಾಕಷ್ಟು ಸಿನಿಮಾಗಳು ಬಂದಿವೆ. ಈಗಿನ ಕಾಲಘಟ್ಟದಲ್ಲಿ ದೈವಾರಾಧನೆಯ ಶ್ರೇಷ್ಠತೆ ಹೇಳುವ ಸಲುವಾಗಿ ಈ ಸಿನಿಮಾ ಮಾಡಿದ್ದೀನಿ. ಆದರೆ ಕಾಂತಾರ ಬಳಿಕ ದೈವದ ಹಾಡಿಗೆ ತಪ್ಪಾಗಿ ರೀಲ್ಸ್ ಮಾಡೋದು ಜಾಸ್ತಿ ಆಗಿದೆ. ದೈವಾರಾಧನೆಗೆ ಅಪಮಾನ ಮಾಡಬೇಡಿ. ಪಂಜುರ್ಲಿ, ದೈವಾರಾಧನೆ, ಕೋಲ ನಮ್ಮ ನೆಲದ ಮೂಲ ಸಂಸ್ಕೃತಿ. ನಮ್ಮ ನೆಲದ ಕಥೆ ಹೇಳಬೇಕು ಅಂತಾ ಈ ಸಿನಿಮಾ ಮಾಡಿದ್ದೀನಿ ದಯವಿಟ್ಟು ದೈವದ ಹಾಡಿಗೆ ತಪ್ಪಾಗಿ ರೀಲ್ಸ್ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.
ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.
ನವೆಂಬರ್ 27 ರಂದು ಕಾಂತಾರ ಚಾಪ್ಟರ್ ಒಂದರ ಮುಹೂರ್ತ ನೆರವೇರಿತ್ತು. ಕಾಂತಾರ ಚಿತ್ರತಂಡ ವಿಶೇಷವಾದ ಫಸ್ಟ್ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿತ್ತು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…