ಚಿತ್ರ ಮಂಜರಿ

ಕಾಂತಾರ ಚಿತ್ರದ ʼವರಾಹರೂಪಂ’ಹಾಡಿಗೆ ಬೀಳಲಿದಿಯಾ ಬ್ರೇಕ್‌ ? ಚಿತ್ರ ತಂಡಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯ

ತಿರುವನಂತಪುರ: ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರದ ʼಕಾಂತಾರʼದ ʼವರಾಹರೂಪಂʼ ಹಾಡನ್ನು ಪ್ರದರ್ಶಿಸದಂತೆ ಕೇರಳದ ಮತ್ತೊಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಮಾತೃಭೂಮಿ ಮ್ಯೂಸಿಕ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ದಾವೆಗೆ ಸಂಬಂಧಿಸಿದಂತೆ ಪಾಲಕ್ಕಾಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ಆದೇಶ ನೀಡಿದೆ.

ಮುಂದಿನ ಆದೇಶದವರೆಗೆ ಹಾಡಿನ ಪ್ರದರ್ಶನ, ಸ್ಟ್ರೀಮಿಂಗ್‌ ಅಥವಾ ಸಾರ್ವಜನಿಕರಿಗೆ ವಿತರಿಸದಂತೆ ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ ಎಂದು ಮಲಯಾಳಂ ದಿನಪತ್ರಿಕೆ ʼಮಾತೃಭೂಮಿʼ ವರದಿ ತಿಳಿಸಿದೆ.

ಪೃಥ್ವಿರಾಜ್ ಪ್ರೊಡಕ್ಷನ್ಸ್, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್, ಅಮೆಜಾನ್, ಸ್ಪಾಟಿಫೈ, ಯೂಟ್ಯೂಬ್, ವಿಂಕ್ ಮ್ಯೂಸಿಕ್ ಮತ್ತು ಜಿಯೋಸಾವನ್‌ಗೆ ನೋಟಿಸ್ ನೀಡಲಾಗಿದೆ ಎಂದು ಅದು ಹೇಳಿದೆ.

ತನ್ನ ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ಕೇರಳದ ಜನಪ್ರಿಯ ಸಂಗೀತ ತಂಡ ಥೈಕ್ಕುಡಂ ಬ್ರಿಜ್‌ ಹೂಡಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಕೋರಿಕ್ಕೋಡ್‌ ಪ್ರಧಾನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವರಾಹರೂಪಂ ಹಾಡಿಗೆ ತಡೆ ನೀಡಿದ್ದರು.

ರಿಷಬ್ ಶೆಟ್ಟಿ ಅಭಿನಯದ ಸೆಪ್ಟೆಂಬರ್ 30, 2022ರಂದು ಬ್ಲಾಕ್‌ಬಸ್ಟರ್ ಕನ್ನಡ ಚಲನಚಿತ್ರ ʼಕಾಂತಾರʼ ಬಿಡುಗಡೆಯಾಯಿತು. ಇದಾದ ಕೆಲ ದಿನಗಳಲ್ಲಿಯೇ ಚಿತ್ರ ನಿರ್ಮಾಣ ಸಂಸ್ಥೆ ಹಾಗೂ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.

ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 62 ಲಕ್ಷ ಬಾರಿ ವೀಕ್ಷಿಸಲಾಗಿದೆ. ಹೊಂಬಾಳೆ ಫಿಲಂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ 13 ದಿನಗಳ ಹಿಂದೆ ಬಿಡುಗಡೆಯಾದ ವರಾಹ ರೂಪಂ ಈಗಾಗಲೇ 2.3 ಕೋಟಿ ವೀಕ್ಷಣೆ ಪಡೆದುಕೊಂಡಿದೆ.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

6 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

7 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

7 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

8 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

8 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago