ತಿರುವನಂತಪುರ: ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರದ ʼಕಾಂತಾರʼದ ʼವರಾಹರೂಪಂʼ ಹಾಡನ್ನು ಪ್ರದರ್ಶಿಸದಂತೆ ಕೇರಳದ ಮತ್ತೊಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ.
ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಮಾತೃಭೂಮಿ ಮ್ಯೂಸಿಕ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ದಾವೆಗೆ ಸಂಬಂಧಿಸಿದಂತೆ ಪಾಲಕ್ಕಾಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ಆದೇಶ ನೀಡಿದೆ.
ಮುಂದಿನ ಆದೇಶದವರೆಗೆ ಹಾಡಿನ ಪ್ರದರ್ಶನ, ಸ್ಟ್ರೀಮಿಂಗ್ ಅಥವಾ ಸಾರ್ವಜನಿಕರಿಗೆ ವಿತರಿಸದಂತೆ ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ ಮತ್ತು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಿಗೆ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ ಎಂದು ಮಲಯಾಳಂ ದಿನಪತ್ರಿಕೆ ʼಮಾತೃಭೂಮಿʼ ವರದಿ ತಿಳಿಸಿದೆ.
ಪೃಥ್ವಿರಾಜ್ ಪ್ರೊಡಕ್ಷನ್ಸ್, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್, ಅಮೆಜಾನ್, ಸ್ಪಾಟಿಫೈ, ಯೂಟ್ಯೂಬ್, ವಿಂಕ್ ಮ್ಯೂಸಿಕ್ ಮತ್ತು ಜಿಯೋಸಾವನ್ಗೆ ನೋಟಿಸ್ ನೀಡಲಾಗಿದೆ ಎಂದು ಅದು ಹೇಳಿದೆ.
ತನ್ನ ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ಕೇರಳದ ಜನಪ್ರಿಯ ಸಂಗೀತ ತಂಡ ಥೈಕ್ಕುಡಂ ಬ್ರಿಜ್ ಹೂಡಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಕೋರಿಕ್ಕೋಡ್ ಪ್ರಧಾನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವರಾಹರೂಪಂ ಹಾಡಿಗೆ ತಡೆ ನೀಡಿದ್ದರು.
ರಿಷಬ್ ಶೆಟ್ಟಿ ಅಭಿನಯದ ಸೆಪ್ಟೆಂಬರ್ 30, 2022ರಂದು ಬ್ಲಾಕ್ಬಸ್ಟರ್ ಕನ್ನಡ ಚಲನಚಿತ್ರ ʼಕಾಂತಾರʼ ಬಿಡುಗಡೆಯಾಯಿತು. ಇದಾದ ಕೆಲ ದಿನಗಳಲ್ಲಿಯೇ ಚಿತ್ರ ನಿರ್ಮಾಣ ಸಂಸ್ಥೆ ಹಾಗೂ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.
ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 62 ಲಕ್ಷ ಬಾರಿ ವೀಕ್ಷಿಸಲಾಗಿದೆ. ಹೊಂಬಾಳೆ ಫಿಲಂಸ್ನ ಯೂಟ್ಯೂಬ್ ಚಾನೆಲ್ನಲ್ಲಿ 13 ದಿನಗಳ ಹಿಂದೆ ಬಿಡುಗಡೆಯಾದ ವರಾಹ ರೂಪಂ ಈಗಾಗಲೇ 2.3 ಕೋಟಿ ವೀಕ್ಷಣೆ ಪಡೆದುಕೊಂಡಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…