ಚಿತ್ರ ಮಂಜರಿ

ಕಾಂತಾರ ಚಿತ್ರದ ʼವರಾಹರೂಪಂ’ಹಾಡಿಗೆ ಬೀಳಲಿದಿಯಾ ಬ್ರೇಕ್‌ ? ಚಿತ್ರ ತಂಡಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯ

ತಿರುವನಂತಪುರ: ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರದ ʼಕಾಂತಾರʼದ ʼವರಾಹರೂಪಂʼ ಹಾಡನ್ನು ಪ್ರದರ್ಶಿಸದಂತೆ ಕೇರಳದ ಮತ್ತೊಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಮಾತೃಭೂಮಿ ಮ್ಯೂಸಿಕ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ದಾವೆಗೆ ಸಂಬಂಧಿಸಿದಂತೆ ಪಾಲಕ್ಕಾಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ಆದೇಶ ನೀಡಿದೆ.

ಮುಂದಿನ ಆದೇಶದವರೆಗೆ ಹಾಡಿನ ಪ್ರದರ್ಶನ, ಸ್ಟ್ರೀಮಿಂಗ್‌ ಅಥವಾ ಸಾರ್ವಜನಿಕರಿಗೆ ವಿತರಿಸದಂತೆ ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ ಎಂದು ಮಲಯಾಳಂ ದಿನಪತ್ರಿಕೆ ʼಮಾತೃಭೂಮಿʼ ವರದಿ ತಿಳಿಸಿದೆ.

ಪೃಥ್ವಿರಾಜ್ ಪ್ರೊಡಕ್ಷನ್ಸ್, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್, ಅಮೆಜಾನ್, ಸ್ಪಾಟಿಫೈ, ಯೂಟ್ಯೂಬ್, ವಿಂಕ್ ಮ್ಯೂಸಿಕ್ ಮತ್ತು ಜಿಯೋಸಾವನ್‌ಗೆ ನೋಟಿಸ್ ನೀಡಲಾಗಿದೆ ಎಂದು ಅದು ಹೇಳಿದೆ.

ತನ್ನ ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ಕೇರಳದ ಜನಪ್ರಿಯ ಸಂಗೀತ ತಂಡ ಥೈಕ್ಕುಡಂ ಬ್ರಿಜ್‌ ಹೂಡಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಕೋರಿಕ್ಕೋಡ್‌ ಪ್ರಧಾನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವರಾಹರೂಪಂ ಹಾಡಿಗೆ ತಡೆ ನೀಡಿದ್ದರು.

ರಿಷಬ್ ಶೆಟ್ಟಿ ಅಭಿನಯದ ಸೆಪ್ಟೆಂಬರ್ 30, 2022ರಂದು ಬ್ಲಾಕ್‌ಬಸ್ಟರ್ ಕನ್ನಡ ಚಲನಚಿತ್ರ ʼಕಾಂತಾರʼ ಬಿಡುಗಡೆಯಾಯಿತು. ಇದಾದ ಕೆಲ ದಿನಗಳಲ್ಲಿಯೇ ಚಿತ್ರ ನಿರ್ಮಾಣ ಸಂಸ್ಥೆ ಹಾಗೂ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.

ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 62 ಲಕ್ಷ ಬಾರಿ ವೀಕ್ಷಿಸಲಾಗಿದೆ. ಹೊಂಬಾಳೆ ಫಿಲಂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ 13 ದಿನಗಳ ಹಿಂದೆ ಬಿಡುಗಡೆಯಾದ ವರಾಹ ರೂಪಂ ಈಗಾಗಲೇ 2.3 ಕೋಟಿ ವೀಕ್ಷಣೆ ಪಡೆದುಕೊಂಡಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago