ಚಿತ್ರ ಮಂಜರಿ

ಕಾಂತಾರ ಚಿತ್ರದ ʼವರಾಹರೂಪಂ’ಹಾಡಿಗೆ ಬೀಳಲಿದಿಯಾ ಬ್ರೇಕ್‌ ? ಚಿತ್ರ ತಂಡಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯ

ತಿರುವನಂತಪುರ: ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರದ ʼಕಾಂತಾರʼದ ʼವರಾಹರೂಪಂʼ ಹಾಡನ್ನು ಪ್ರದರ್ಶಿಸದಂತೆ ಕೇರಳದ ಮತ್ತೊಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಮಾತೃಭೂಮಿ ಮ್ಯೂಸಿಕ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ದಾವೆಗೆ ಸಂಬಂಧಿಸಿದಂತೆ ಪಾಲಕ್ಕಾಡ್ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಈ ಆದೇಶ ನೀಡಿದೆ.

ಮುಂದಿನ ಆದೇಶದವರೆಗೆ ಹಾಡಿನ ಪ್ರದರ್ಶನ, ಸ್ಟ್ರೀಮಿಂಗ್‌ ಅಥವಾ ಸಾರ್ವಜನಿಕರಿಗೆ ವಿತರಿಸದಂತೆ ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ ಮತ್ತು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ ಎಂದು ಮಲಯಾಳಂ ದಿನಪತ್ರಿಕೆ ʼಮಾತೃಭೂಮಿʼ ವರದಿ ತಿಳಿಸಿದೆ.

ಪೃಥ್ವಿರಾಜ್ ಪ್ರೊಡಕ್ಷನ್ಸ್, ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್, ಅಮೆಜಾನ್, ಸ್ಪಾಟಿಫೈ, ಯೂಟ್ಯೂಬ್, ವಿಂಕ್ ಮ್ಯೂಸಿಕ್ ಮತ್ತು ಜಿಯೋಸಾವನ್‌ಗೆ ನೋಟಿಸ್ ನೀಡಲಾಗಿದೆ ಎಂದು ಅದು ಹೇಳಿದೆ.

ತನ್ನ ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದು ಕೇರಳದ ಜನಪ್ರಿಯ ಸಂಗೀತ ತಂಡ ಥೈಕ್ಕುಡಂ ಬ್ರಿಜ್‌ ಹೂಡಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಕೋರಿಕ್ಕೋಡ್‌ ಪ್ರಧಾನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ವರಾಹರೂಪಂ ಹಾಡಿಗೆ ತಡೆ ನೀಡಿದ್ದರು.

ರಿಷಬ್ ಶೆಟ್ಟಿ ಅಭಿನಯದ ಸೆಪ್ಟೆಂಬರ್ 30, 2022ರಂದು ಬ್ಲಾಕ್‌ಬಸ್ಟರ್ ಕನ್ನಡ ಚಲನಚಿತ್ರ ʼಕಾಂತಾರʼ ಬಿಡುಗಡೆಯಾಯಿತು. ಇದಾದ ಕೆಲ ದಿನಗಳಲ್ಲಿಯೇ ಚಿತ್ರ ನಿರ್ಮಾಣ ಸಂಸ್ಥೆ ಹಾಗೂ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.

ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 62 ಲಕ್ಷ ಬಾರಿ ವೀಕ್ಷಿಸಲಾಗಿದೆ. ಹೊಂಬಾಳೆ ಫಿಲಂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ 13 ದಿನಗಳ ಹಿಂದೆ ಬಿಡುಗಡೆಯಾದ ವರಾಹ ರೂಪಂ ಈಗಾಗಲೇ 2.3 ಕೋಟಿ ವೀಕ್ಷಣೆ ಪಡೆದುಕೊಂಡಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

16 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

20 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

20 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago