ಚಿತ್ರ ಮಂಜರಿ

ಕಾಂತಾರ 2 ’ ಸಿನೆಮಾ ಮಾಡಲು ಪಂಜುರ್ಲಿ ದೈವ ಅನುಗ್ರಹ

ಮೈಸೂರು: ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಕಾಂತಾರ 2 ಬರುವದು ಬಹುತೇಕ ಖಚಿತವಾಗಿದೆ.ದೈವಗಳ ಕುರಿತು ಸಿನೆಮಾ ಮಾಡಲು ಕೆಲವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರಿಂದ ’ಕಾಂತಾರ ೨’ ಬಗ್ಗೆ ಸಹಜವಾಗಿಯೇ ಕುತೂಹಲ ಕೂಡ ಮೂಡಿತ್ತು.ಹಾಗಾಗಿಯೇ ರಿಷಬ್ ಶೆಟ್ಟಿ ಪಂಜುರ್ಲಿ ದೈವದ ಮೊರೆ ಹೋಗಿದ್ದರು.ದೈವ ಹಲವು ಷರತ್ತುಗಳೊಂದಿಗೆ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಮಂಗಳೂರು ನಗರ ಹೊರವಲಯದ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಕಾಂತಾರ ಸಿನೆಮಾದ
ನಿರ್ದೇಶಕ ರಿಷಬ್ ಶೆಟ್ಟಿ,ನಿರ್ಮಾಪಕ ವಿಜಯ್ ಕಿರಗಂದೂರ್,ನಾಯಕಿ ಗೌತಮಿ ಗೌಡ ಸೇರಿದಂತೆ ಬಹುತೇಕ ಸದಸ್ಯರು ಹಾಜರಿದ್ದರು. ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅವರ ನೇತ್ರತ್ವದಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲಾದಲ್ಲಿ ಕಾಂತಾರ ಸಿನೆಮಾ 2 ಮಾಡುವ ಕುರಿತು ರಿಷಬ್ ಒಪ್ಪಿಗೆ ಕೇಳಿದ್ದರು.

ಕಾಂತಾರ ಸಿನೆಮಾವು ರೂ.೧೫ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು ಇದೀಗ ರೂ.೪೦೦ ಕೋಟಿಗೂ ಅಧಿಕ ಹಣ ಬಾಚಿಕೊಂಡು ಇನ್ನೂ ತುಂಬಿದ ಪ್ರದರ್ಶನದಲ್ಲಿ ಮುಂದುವರಿದಿದೆ. ಇದೇ ಸಂದರ್ಭ ರಿಷಬ್ ಶೆಟ್ಟಿ ಮತ್ತು ತಂಡ ಭಾಗ 2 ಸಿನೆಮಾಗೆ ದೈವದ ಮೊರೆ ಹೋಗಿದ್ದು ಮುಂದಿನ ಸಿನೆಮಾವನ್ನು ನೂರು ಸಲ ಯೋಚಿಸಿ,ಶ್ರಮ ವಹಿಸಿ ಮಾಡುವಂತೆ ದೈವವು ಎಚ್ಚರಿಕೆ ನೀಡಿದೆ ಎನ್ನಲಾಗಿದೆ.ಎಲ್ಲಿಯೂ ನೇಮ ನಿಷ್ಠೆಗೆ ಅಪಚಾರ ಆಗದಂತೆ ನಿರ್ಮಾಣ ಮಾಡುವಂತೆ ಅಣ್ಣಪ್ಪ ಪಂಜುರ್ಲಿ ದೈವ ಎಚ್ಚರಿಕೆ ನೀಡಿದೆ.

ಈ ನಿಟ್ಟಿನಲ್ಲಿ ನಿರ್ಮಾಪಕ ಹಾಗೂ ನಿರ್ದೇಶಕರು ಸೇರಿ ಕದ್ರಿ ಮಂಜುನಾಥೇಶ್ವರ ದೇಗುಲ ಸೇರಿದಂತೆ ಹಲವು ದೇವಾಲಯಗಳ ಅಭಿವೃದ್ಧಿಗೆ ಸಿನೆಮಾ ಪ್ರದರ್ಶನದಿಂದ ಬಂದ ಲಾಭಾಂಶದಲ್ಲಿ ಸ್ವಲ್ಪ ಮೊತ್ತವನ್ನು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮಧ್ಯರಾತ್ರಿ ನಡೆದ ದೈವದ ಜೊತೆಗಿನ ಮಾತೂಕತೆಯಲ್ಲಿ ದೈವ ಹಲವು ಸೂಚನೆಗಳ ಜತೆ ಸಿನೆಮಾ ಮಾಡಲು ಅನುಮತಿ ನೀಡಿದೆ ಎಂದು ಹೇಳಲಾಗಿದೆ.

ಹಾಗಾಗಿ ಸಿನೆಮಾದ ಕಥೆ ಮಾಡಲು ರಿಷಬ್ ಶೆಟ್ಟಿ ಅಂಡ್ ಟೀಮ್ ಹುರುಪಿನಿಂದಲೇ ತಯಾರಾಗಿದೆ. ಈ ಕುರಿತು ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡದಿದ್ದರೂ ಕೋಲದಲ್ಲಿ ಭಾಗವಹಿಸಿದ್ದ ಹಲವರು ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಪಂಜುರ್ಲಿ ದೈವವೂ ಕೂಡಾ ’ಕಾಂತಾರ ೨’ ಮಾಡಲು ಅನುಮತಿ ನೀಡಿದೆ.ಜೊತೆಗೆ ಕೆಲವು ಸಲಹೆ ಮತ್ತು ಎಚ್ಚರಿಕೆಯನ್ನೂ ಕೂಡಾ ನೀಡಿದೆ. ಭಾಗ-2 ರಲ್ಲಿ ಈ ಹಿಂದಿನ ಕಲಾವಿದರೇ ಮುಂದುವರಿಯಲಿದ್ದಾರೆ.ಕಾಂತಾರ ಸಿನೆಮಾ ತಂಡದ ಜತೆಯಲ್ಲಿ ರಿಷಬ್ ಕುಟುಂಬ ಕೂಡಾ ಕೋಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು.

andolana

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

9 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago