ಚಿತ್ರ ಮಂಜರಿ

ಕಾಂತಾರದಲ್ಲಿ ಮತ್ತೆ ‘ವರಾಹ ರೂಪಂ’ ಹಾಡು ಸೇರ್ಪಡೆ

ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿನ ವಿಚಾರವಾಗಿ ತಗಾದೆ ತೆಗೆದು ನ್ಯಾಯಾಲಯದ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ‘ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಆದ್ರೀಗ ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಇದಕ್ಕೂ ಮುನ್ನ, ವರಾಹ ರೂಪಂ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಅನುಮತಿ ಇಲ್ಲದೇ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಕಾಂತಾರ ಚಿತ್ರ ತಂಡವು, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಹೊಂಬಾಳೆ ಫಿಲಂಸ್​ನ ಯೂಟ್ಯೂಬ್​ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಸೇರಿದಂತೆ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್​ ಮಾಡಿತ್ತು. ಓಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಿನಿಂದ ಬೇರೆ ಟ್ಯೂನ್​ ಬಳಸಲಾಗಿತ್ತು.ಆ ನಂತರ ತಡೆಯಾಜ್ಞೆ ತೆರವಾಗಿ ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಅದರಂತೆ, ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್​ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಲಭ್ಯವಿದೆ. ಕೆಲ ದಿನಗಳ ಹಿಂದೆ ಅಮೆಜಾನ್ ಪ್ರೈಮ್ ಸಂಸ್ಥೆಯು ವರಾಹ ರೂಪಂ ಮೂಲ ಹಾಡನ್ನು ತಮಿಳು ಮತ್ತು ಮಲಯಾಳಂ ಆವೃತ್ತಿಯಲ್ಲಿ ಸೇರಿಸಿತ್ತು. ಇದೀಗ ಕನ್ನಡದಲ್ಲೂ ಲಭ್ಯವಿದೆ.

andolanait

Recent Posts

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

11 mins ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

42 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

48 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

52 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

53 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

56 mins ago