ಚಿತ್ರ ಮಂಜರಿ

ಕಾಂತಾರದಲ್ಲಿ ಮತ್ತೆ ‘ವರಾಹ ರೂಪಂ’ ಹಾಡು ಸೇರ್ಪಡೆ

ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿನ ವಿಚಾರವಾಗಿ ತಗಾದೆ ತೆಗೆದು ನ್ಯಾಯಾಲಯದ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ‘ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಆದ್ರೀಗ ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಇದಕ್ಕೂ ಮುನ್ನ, ವರಾಹ ರೂಪಂ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಅನುಮತಿ ಇಲ್ಲದೇ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಕಾಂತಾರ ಚಿತ್ರ ತಂಡವು, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಹೊಂಬಾಳೆ ಫಿಲಂಸ್​ನ ಯೂಟ್ಯೂಬ್​ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಸೇರಿದಂತೆ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್​ ಮಾಡಿತ್ತು. ಓಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಿನಿಂದ ಬೇರೆ ಟ್ಯೂನ್​ ಬಳಸಲಾಗಿತ್ತು.ಆ ನಂತರ ತಡೆಯಾಜ್ಞೆ ತೆರವಾಗಿ ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಅದರಂತೆ, ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್​ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಲಭ್ಯವಿದೆ. ಕೆಲ ದಿನಗಳ ಹಿಂದೆ ಅಮೆಜಾನ್ ಪ್ರೈಮ್ ಸಂಸ್ಥೆಯು ವರಾಹ ರೂಪಂ ಮೂಲ ಹಾಡನ್ನು ತಮಿಳು ಮತ್ತು ಮಲಯಾಳಂ ಆವೃತ್ತಿಯಲ್ಲಿ ಸೇರಿಸಿತ್ತು. ಇದೀಗ ಕನ್ನಡದಲ್ಲೂ ಲಭ್ಯವಿದೆ.

andolanait

Recent Posts

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

45 seconds ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

41 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago