ಚಿತ್ರ ಮಂಜರಿ

ಯಶ್ ಜೊತೆ ನಟಿಸುವ ಇಂಗಿತ ವ್ಯಕ್ತಪಡಿಸಿದ ಕರೀನಾ ಕಪೂರ್

ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಯಶಸ್ಸಿನ ಉತ್ತುಂಗದಲ್ಲಿ ತೇಲುತ್ತಿದ್ದಾರೆ. ಕೆಜಿಎಫ್ ನಿಂದ ಯಶ್ ಗೆ ದೇಶದಾದ್ಯಂತ ಅಭಿಮಾನಿಗಳು ಸೃಷ್ಟಿಯಾಗಿದ್ದಾರೆ.

ಈ ನಡುವೆ ಬಿ ಟೌನ್ ಬ್ಯೂಟಿ, ಯಶ್ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಬಾಲಿವುಡ್ ಡೈರೆಕ್ಟರ್ ಕರಣ್ ಜೋಹರ್ ನಡೆಸಿಕೊಡುವ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ “ಕಾಫಿ ವಿತ್ ಕರಣ್” ಸೀಸನ್ 8 ರಲ್ಲಿ ಕರೀನಾ ಕಪೂರ್ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಕರಣ್ ಅವರು ಕರೀನಾಗೆ ರ್ಯಪಿಡ್ ಫೈರ್ ರೌಂಡ್ ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ವೇಳೆ ಸೌತ್ ಇಂಡಿಯಾದ ಯಾವ ಸ್ಟಾರ್ ಜೊತೆ ನಟಿಸಬೇಕು ಎಂದು ಕರಣ್ ಜೋಹರ್ ಪ್ರಶ್ನೆಯೊಂದನ್ನು ಕೇಳಿದ್ದು, ಅಲ್ಲು ಅರ್ಜುನ್, ಪ್ರಭಾಸ್, ವಿಜಯ್ ದೇವರಕೊಂಡ, ರಾಮ್ ಚರಣ್ ತೇಜ, ಹಾಗೂ ಯಶ್ ಹೆಸರನ್ನು ಮುಂದಿಟ್ಟಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಿರುವ ಬಾಲಿವುಡ್‌ ನಟಿ ಕರೀನಾ ಕಪೂರ್, ಬೆಬೋ ಎಲ್ಲರೂ ಸೂಪರ್,ಆದರೆ “ನಾನು ಕೆಜಿಎಫ್ ಹುಡುಗಿ”. ನನಗೆ ಕೆಜಿಎಫ್ ಸಿನಿಮಾ ಎಂದರೆ ತುಂಬಾ ಇಷ್ಟ. ನಾನು ಯಶ್ ಜೊತೆ ನಟಿಸಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಕೆಜಿಎಫ್‌ ಸರಣಿ ಸಿನಿಮಾ ಬಂದು ಹೋಗಿ ಒಂದುವರೆ ವರ್ಷ ಕಳೆದರೂ ಕ್ರೇಜ್‌ ಮಾತ್ರಾ ಕಮ್ಮಿ ಆಗಿಲ್ಲ. ಈಗಲೂ ಕೂಡ ಕೆಜಿಎಫ್‌ ಗುಂಗಿನಲ್ಲೇ ಇರುವ ರಾಕಿ ಬಾಯ್‌ ಅಭಿಮಾನಿಗಳು, “ಯಶ್‌ 19” ಗಾಗಿ ಕಾಯುತ್ತಿದ್ದಾರೆ. ಸದ್ಯ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ನಲ್ಲಿ ರೆಡಿಯಾಗಿರುವ ಸಲಾರ್‌ ಸಿನಿಮಾದಲ್ಲಿ ಯಶ್‌ ಗೆಸ್ಟ್ ಅಪಿಯರೆನ್ಸ್‌ ನಟಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದರ ನಡುವೆ ಬಿ ಟೌನ್‌ ಬ್ಯೂಟಿ ರಾಕಿಂಗ್‌ ಸ್ಟಾರ್‌ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಅಗಿದೆ.

lokesh

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

2 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

2 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

5 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

5 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

8 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

8 hours ago