ಚಿತ್ರ ಮಂಜರಿ

ಯಶ್ ಜೊತೆ ನಟಿಸುವ ಇಂಗಿತ ವ್ಯಕ್ತಪಡಿಸಿದ ಕರೀನಾ ಕಪೂರ್

ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಯಶಸ್ಸಿನ ಉತ್ತುಂಗದಲ್ಲಿ ತೇಲುತ್ತಿದ್ದಾರೆ. ಕೆಜಿಎಫ್ ನಿಂದ ಯಶ್ ಗೆ ದೇಶದಾದ್ಯಂತ ಅಭಿಮಾನಿಗಳು ಸೃಷ್ಟಿಯಾಗಿದ್ದಾರೆ.

ಈ ನಡುವೆ ಬಿ ಟೌನ್ ಬ್ಯೂಟಿ, ಯಶ್ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಬಾಲಿವುಡ್ ಡೈರೆಕ್ಟರ್ ಕರಣ್ ಜೋಹರ್ ನಡೆಸಿಕೊಡುವ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ “ಕಾಫಿ ವಿತ್ ಕರಣ್” ಸೀಸನ್ 8 ರಲ್ಲಿ ಕರೀನಾ ಕಪೂರ್ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಕರಣ್ ಅವರು ಕರೀನಾಗೆ ರ್ಯಪಿಡ್ ಫೈರ್ ರೌಂಡ್ ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ವೇಳೆ ಸೌತ್ ಇಂಡಿಯಾದ ಯಾವ ಸ್ಟಾರ್ ಜೊತೆ ನಟಿಸಬೇಕು ಎಂದು ಕರಣ್ ಜೋಹರ್ ಪ್ರಶ್ನೆಯೊಂದನ್ನು ಕೇಳಿದ್ದು, ಅಲ್ಲು ಅರ್ಜುನ್, ಪ್ರಭಾಸ್, ವಿಜಯ್ ದೇವರಕೊಂಡ, ರಾಮ್ ಚರಣ್ ತೇಜ, ಹಾಗೂ ಯಶ್ ಹೆಸರನ್ನು ಮುಂದಿಟ್ಟಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಿರುವ ಬಾಲಿವುಡ್‌ ನಟಿ ಕರೀನಾ ಕಪೂರ್, ಬೆಬೋ ಎಲ್ಲರೂ ಸೂಪರ್,ಆದರೆ “ನಾನು ಕೆಜಿಎಫ್ ಹುಡುಗಿ”. ನನಗೆ ಕೆಜಿಎಫ್ ಸಿನಿಮಾ ಎಂದರೆ ತುಂಬಾ ಇಷ್ಟ. ನಾನು ಯಶ್ ಜೊತೆ ನಟಿಸಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಕೆಜಿಎಫ್‌ ಸರಣಿ ಸಿನಿಮಾ ಬಂದು ಹೋಗಿ ಒಂದುವರೆ ವರ್ಷ ಕಳೆದರೂ ಕ್ರೇಜ್‌ ಮಾತ್ರಾ ಕಮ್ಮಿ ಆಗಿಲ್ಲ. ಈಗಲೂ ಕೂಡ ಕೆಜಿಎಫ್‌ ಗುಂಗಿನಲ್ಲೇ ಇರುವ ರಾಕಿ ಬಾಯ್‌ ಅಭಿಮಾನಿಗಳು, “ಯಶ್‌ 19” ಗಾಗಿ ಕಾಯುತ್ತಿದ್ದಾರೆ. ಸದ್ಯ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ನಲ್ಲಿ ರೆಡಿಯಾಗಿರುವ ಸಲಾರ್‌ ಸಿನಿಮಾದಲ್ಲಿ ಯಶ್‌ ಗೆಸ್ಟ್ ಅಪಿಯರೆನ್ಸ್‌ ನಟಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದರ ನಡುವೆ ಬಿ ಟೌನ್‌ ಬ್ಯೂಟಿ ರಾಕಿಂಗ್‌ ಸ್ಟಾರ್‌ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಅಗಿದೆ.

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

60 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago