ಚಿತ್ರ ಮಂಜರಿ

ಯಶ್ ಜೊತೆ ನಟಿಸುವ ಇಂಗಿತ ವ್ಯಕ್ತಪಡಿಸಿದ ಕರೀನಾ ಕಪೂರ್

ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಯಶಸ್ಸಿನ ಉತ್ತುಂಗದಲ್ಲಿ ತೇಲುತ್ತಿದ್ದಾರೆ. ಕೆಜಿಎಫ್ ನಿಂದ ಯಶ್ ಗೆ ದೇಶದಾದ್ಯಂತ ಅಭಿಮಾನಿಗಳು ಸೃಷ್ಟಿಯಾಗಿದ್ದಾರೆ.

ಈ ನಡುವೆ ಬಿ ಟೌನ್ ಬ್ಯೂಟಿ, ಯಶ್ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಬಾಲಿವುಡ್ ಡೈರೆಕ್ಟರ್ ಕರಣ್ ಜೋಹರ್ ನಡೆಸಿಕೊಡುವ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ “ಕಾಫಿ ವಿತ್ ಕರಣ್” ಸೀಸನ್ 8 ರಲ್ಲಿ ಕರೀನಾ ಕಪೂರ್ ಭಾಗಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಕರಣ್ ಅವರು ಕರೀನಾಗೆ ರ್ಯಪಿಡ್ ಫೈರ್ ರೌಂಡ್ ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ವೇಳೆ ಸೌತ್ ಇಂಡಿಯಾದ ಯಾವ ಸ್ಟಾರ್ ಜೊತೆ ನಟಿಸಬೇಕು ಎಂದು ಕರಣ್ ಜೋಹರ್ ಪ್ರಶ್ನೆಯೊಂದನ್ನು ಕೇಳಿದ್ದು, ಅಲ್ಲು ಅರ್ಜುನ್, ಪ್ರಭಾಸ್, ವಿಜಯ್ ದೇವರಕೊಂಡ, ರಾಮ್ ಚರಣ್ ತೇಜ, ಹಾಗೂ ಯಶ್ ಹೆಸರನ್ನು ಮುಂದಿಟ್ಟಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಿರುವ ಬಾಲಿವುಡ್‌ ನಟಿ ಕರೀನಾ ಕಪೂರ್, ಬೆಬೋ ಎಲ್ಲರೂ ಸೂಪರ್,ಆದರೆ “ನಾನು ಕೆಜಿಎಫ್ ಹುಡುಗಿ”. ನನಗೆ ಕೆಜಿಎಫ್ ಸಿನಿಮಾ ಎಂದರೆ ತುಂಬಾ ಇಷ್ಟ. ನಾನು ಯಶ್ ಜೊತೆ ನಟಿಸಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಕೆಜಿಎಫ್‌ ಸರಣಿ ಸಿನಿಮಾ ಬಂದು ಹೋಗಿ ಒಂದುವರೆ ವರ್ಷ ಕಳೆದರೂ ಕ್ರೇಜ್‌ ಮಾತ್ರಾ ಕಮ್ಮಿ ಆಗಿಲ್ಲ. ಈಗಲೂ ಕೂಡ ಕೆಜಿಎಫ್‌ ಗುಂಗಿನಲ್ಲೇ ಇರುವ ರಾಕಿ ಬಾಯ್‌ ಅಭಿಮಾನಿಗಳು, “ಯಶ್‌ 19” ಗಾಗಿ ಕಾಯುತ್ತಿದ್ದಾರೆ. ಸದ್ಯ ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ನಲ್ಲಿ ರೆಡಿಯಾಗಿರುವ ಸಲಾರ್‌ ಸಿನಿಮಾದಲ್ಲಿ ಯಶ್‌ ಗೆಸ್ಟ್ ಅಪಿಯರೆನ್ಸ್‌ ನಟಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದರ ನಡುವೆ ಬಿ ಟೌನ್‌ ಬ್ಯೂಟಿ ರಾಕಿಂಗ್‌ ಸ್ಟಾರ್‌ ಬಗ್ಗೆ ಮಾತನಾಡಿರುವ ವಿಡಿಯೋ ವೈರಲ್‌ ಅಗಿದೆ.

lokesh

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago