ಚಿತ್ರ ಮಂಜರಿ

ಕರ್ಮದ ಏಟು ತಪ್ಪಲ್ಲ : ನಟ ಧನ್ವೀರ್‌ ಎಚ್ಚರಿಕೆ

ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳು ಸಾಧ್ಯವಿಲ್ಲ ಅಂತಾ ನೆಗಿಟಿವ್‌ ಕಮೆಂಟ್‌ ಮಾಡುವವರಿಗೆ ನಟ ಧನ್ವೀರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.
ಈಗಾಗಲೇ ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ 80 ರ ದಶಕದಲ್ಲಿನ ಬೆಂಗಳೂರು ಕರಗದ ವೇಳೆ ನಡೆದ ನೈಜ ಘಟನೆಯನ್ನು ಬಿಚ್ಚಿಡುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ವಿಮರ್ಶೆ ಜೋರಾಗಿದೆ. ಧನ್ವೀರ್‌ ಅವರಿಗೆ ಯಾವಾಗಲೂ ಸಪೋರ್ಟ್‌ ಮಾಡುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಫೋಟೋ ಬಳಸಿಕೊಂಡು ನೆಗಿಟಿವ್‌ ಕಮೆಂಟ್‌ ಮಾಡಲಾಗುತ್ತಿದೆ. ಹೇಗೆ ನೆಗಿಟಿವ್‌ ಕಾಮೆಂಟ್‌ ಮಾಡುತ್ತಿರುವವರ ಮೇಲೆ ನಟ ಧನ್ವೀರ್‌ ಬೇಸರ ಹೊರ ಹಾಕಿದ್ದಾರೆ.
ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು. ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಾಧ್ಯಮಗಳಲ್ಲಿ ನಿಜವಾದ ವಿಮರ್ಶೆ ಕೊಡುವವರು ಸಿನಿಮಾ ಬಿಡುಗಡೆ ಆದಮೇಲೆ ಜನರ ಬಳಿ ಬಂದು ಕೇಳಿ ವಿಮರ್ಶೆ ಪಡೆಯುವವರು ನಿಜವಾದ ಸಿನಿ ಪ್ರೇಮಿಗಳು. ರಿವ್ಯೂವರ್ಸ್‌ ಅಂತಾ ಹೇಳಿಕೊಂಡು ಏನೇನೋ ಬರೆದುಕೊಂಡು ತುಳಿಯಲು ಪ್ರಯತ್ನಿಸುತ್ತಾರೆ. ಅಂತಹವರು ನಿಜವಾದ ಚಿತ್ರ ಪ್ರೇಮಿಗಳಲ್ಲ. ಹೊಟ್ಟೆ ಪಾಡಿಗಾಗಿ ಈ ರೀತಿಯ ಕೆಲಸ ಮಾಡಿಕೊಂಡು  ಕೂರುತ್ತಾರೆ. ಯಾರೋ ಏನೋ ಹೇಳುತ್ತಾರೆ ಅಂತಾ ಸುದ್ದಿ ಮಾಡುತ್ತಾರೆ. ಏನು ಮಾಡುತ್ತಾರೋ ಮಾಡಲಿ. ಧರ್ಮಕ್ಕೂ ಕರ್ಮಕ್ಕೂ ಸಮಯ ಬರುತ್ತೆ ಅದಕ್ಕೆ ಕಾಯುತ್ತೀನಿ.
ನನ್ನ ಹಿಂದಿನ ಸಿನಿಮಾ ಸಮಯದಲ್ಲಿಯೂ ಕೂಡ ಇದೇ ರೀತಿ ಆಗಿತ್ತು. ಇರ್ಲಿ ಪರವಾಗಿಲ್ಲ, ಬೆಳೆಯುತ್ತಿದ್ದೀಯ, ಬೆಳೆದ ಮೇಲೆ ಕಾಂಟ್ರವರ್ಸಿ ಅನ್ನೋದು ಶುರುವಾಗುತ್ತೆ ತಲೆ ಕೆಡಿಸಿಕೊಳ್ಳಬೇಡ ಅಂತಾ ದೊಡ್ಡವರು ಹೇಳಿದ್ದಾರೆ ಅಂತಾ ನಟ ಧನ್ವೀರ್‌ ಹೇಳಿದ್ದಾರೆ.
lokesh

Recent Posts

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

20 mins ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

33 mins ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

42 mins ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

2 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

2 hours ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

2 hours ago