ಚಿತ್ರ ಮಂಜರಿ

ಕರ್ಮದ ಏಟು ತಪ್ಪಲ್ಲ : ನಟ ಧನ್ವೀರ್‌ ಎಚ್ಚರಿಕೆ

ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳು ಸಾಧ್ಯವಿಲ್ಲ ಅಂತಾ ನೆಗಿಟಿವ್‌ ಕಮೆಂಟ್‌ ಮಾಡುವವರಿಗೆ ನಟ ಧನ್ವೀರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.
ಈಗಾಗಲೇ ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ 80 ರ ದಶಕದಲ್ಲಿನ ಬೆಂಗಳೂರು ಕರಗದ ವೇಳೆ ನಡೆದ ನೈಜ ಘಟನೆಯನ್ನು ಬಿಚ್ಚಿಡುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ವಿಮರ್ಶೆ ಜೋರಾಗಿದೆ. ಧನ್ವೀರ್‌ ಅವರಿಗೆ ಯಾವಾಗಲೂ ಸಪೋರ್ಟ್‌ ಮಾಡುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಫೋಟೋ ಬಳಸಿಕೊಂಡು ನೆಗಿಟಿವ್‌ ಕಮೆಂಟ್‌ ಮಾಡಲಾಗುತ್ತಿದೆ. ಹೇಗೆ ನೆಗಿಟಿವ್‌ ಕಾಮೆಂಟ್‌ ಮಾಡುತ್ತಿರುವವರ ಮೇಲೆ ನಟ ಧನ್ವೀರ್‌ ಬೇಸರ ಹೊರ ಹಾಕಿದ್ದಾರೆ.
ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು. ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಾಧ್ಯಮಗಳಲ್ಲಿ ನಿಜವಾದ ವಿಮರ್ಶೆ ಕೊಡುವವರು ಸಿನಿಮಾ ಬಿಡುಗಡೆ ಆದಮೇಲೆ ಜನರ ಬಳಿ ಬಂದು ಕೇಳಿ ವಿಮರ್ಶೆ ಪಡೆಯುವವರು ನಿಜವಾದ ಸಿನಿ ಪ್ರೇಮಿಗಳು. ರಿವ್ಯೂವರ್ಸ್‌ ಅಂತಾ ಹೇಳಿಕೊಂಡು ಏನೇನೋ ಬರೆದುಕೊಂಡು ತುಳಿಯಲು ಪ್ರಯತ್ನಿಸುತ್ತಾರೆ. ಅಂತಹವರು ನಿಜವಾದ ಚಿತ್ರ ಪ್ರೇಮಿಗಳಲ್ಲ. ಹೊಟ್ಟೆ ಪಾಡಿಗಾಗಿ ಈ ರೀತಿಯ ಕೆಲಸ ಮಾಡಿಕೊಂಡು  ಕೂರುತ್ತಾರೆ. ಯಾರೋ ಏನೋ ಹೇಳುತ್ತಾರೆ ಅಂತಾ ಸುದ್ದಿ ಮಾಡುತ್ತಾರೆ. ಏನು ಮಾಡುತ್ತಾರೋ ಮಾಡಲಿ. ಧರ್ಮಕ್ಕೂ ಕರ್ಮಕ್ಕೂ ಸಮಯ ಬರುತ್ತೆ ಅದಕ್ಕೆ ಕಾಯುತ್ತೀನಿ.
ನನ್ನ ಹಿಂದಿನ ಸಿನಿಮಾ ಸಮಯದಲ್ಲಿಯೂ ಕೂಡ ಇದೇ ರೀತಿ ಆಗಿತ್ತು. ಇರ್ಲಿ ಪರವಾಗಿಲ್ಲ, ಬೆಳೆಯುತ್ತಿದ್ದೀಯ, ಬೆಳೆದ ಮೇಲೆ ಕಾಂಟ್ರವರ್ಸಿ ಅನ್ನೋದು ಶುರುವಾಗುತ್ತೆ ತಲೆ ಕೆಡಿಸಿಕೊಳ್ಳಬೇಡ ಅಂತಾ ದೊಡ್ಡವರು ಹೇಳಿದ್ದಾರೆ ಅಂತಾ ನಟ ಧನ್ವೀರ್‌ ಹೇಳಿದ್ದಾರೆ.
lokesh

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

11 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

11 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

11 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

11 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

11 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

12 hours ago