ಚಿತ್ರ ಮಂಜರಿ

ಕರ್ಮದ ಏಟು ತಪ್ಪಲ್ಲ : ನಟ ಧನ್ವೀರ್‌ ಎಚ್ಚರಿಕೆ

ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳು ಸಾಧ್ಯವಿಲ್ಲ ಅಂತಾ ನೆಗಿಟಿವ್‌ ಕಮೆಂಟ್‌ ಮಾಡುವವರಿಗೆ ನಟ ಧನ್ವೀರ್‌ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ.
ಈಗಾಗಲೇ ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ ಬಿಡುಗಡೆಯಾಗಿದ್ದು, ಸಿನಿ ರಸಿಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಧನ್ವೀರ್‌ ಹಾಗೂ ಮೇಘಾ ಶೆಟ್ಟಿ ಅಭಿನಯದ ಕೈವ ಸಿನಿಮಾ 80 ರ ದಶಕದಲ್ಲಿನ ಬೆಂಗಳೂರು ಕರಗದ ವೇಳೆ ನಡೆದ ನೈಜ ಘಟನೆಯನ್ನು ಬಿಚ್ಚಿಡುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ವಿಮರ್ಶೆ ಜೋರಾಗಿದೆ. ಧನ್ವೀರ್‌ ಅವರಿಗೆ ಯಾವಾಗಲೂ ಸಪೋರ್ಟ್‌ ಮಾಡುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಫೋಟೋ ಬಳಸಿಕೊಂಡು ನೆಗಿಟಿವ್‌ ಕಮೆಂಟ್‌ ಮಾಡಲಾಗುತ್ತಿದೆ. ಹೇಗೆ ನೆಗಿಟಿವ್‌ ಕಾಮೆಂಟ್‌ ಮಾಡುತ್ತಿರುವವರ ಮೇಲೆ ನಟ ಧನ್ವೀರ್‌ ಬೇಸರ ಹೊರ ಹಾಕಿದ್ದಾರೆ.
ಧರ್ಮದ ಏಟಿನಿಂದ ತಪ್ಪಿಸಿಕೊಳ್ಳಬಹುದು. ಆದರೆ ಕರ್ಮದ ಏಟಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಾಧ್ಯಮಗಳಲ್ಲಿ ನಿಜವಾದ ವಿಮರ್ಶೆ ಕೊಡುವವರು ಸಿನಿಮಾ ಬಿಡುಗಡೆ ಆದಮೇಲೆ ಜನರ ಬಳಿ ಬಂದು ಕೇಳಿ ವಿಮರ್ಶೆ ಪಡೆಯುವವರು ನಿಜವಾದ ಸಿನಿ ಪ್ರೇಮಿಗಳು. ರಿವ್ಯೂವರ್ಸ್‌ ಅಂತಾ ಹೇಳಿಕೊಂಡು ಏನೇನೋ ಬರೆದುಕೊಂಡು ತುಳಿಯಲು ಪ್ರಯತ್ನಿಸುತ್ತಾರೆ. ಅಂತಹವರು ನಿಜವಾದ ಚಿತ್ರ ಪ್ರೇಮಿಗಳಲ್ಲ. ಹೊಟ್ಟೆ ಪಾಡಿಗಾಗಿ ಈ ರೀತಿಯ ಕೆಲಸ ಮಾಡಿಕೊಂಡು  ಕೂರುತ್ತಾರೆ. ಯಾರೋ ಏನೋ ಹೇಳುತ್ತಾರೆ ಅಂತಾ ಸುದ್ದಿ ಮಾಡುತ್ತಾರೆ. ಏನು ಮಾಡುತ್ತಾರೋ ಮಾಡಲಿ. ಧರ್ಮಕ್ಕೂ ಕರ್ಮಕ್ಕೂ ಸಮಯ ಬರುತ್ತೆ ಅದಕ್ಕೆ ಕಾಯುತ್ತೀನಿ.
ನನ್ನ ಹಿಂದಿನ ಸಿನಿಮಾ ಸಮಯದಲ್ಲಿಯೂ ಕೂಡ ಇದೇ ರೀತಿ ಆಗಿತ್ತು. ಇರ್ಲಿ ಪರವಾಗಿಲ್ಲ, ಬೆಳೆಯುತ್ತಿದ್ದೀಯ, ಬೆಳೆದ ಮೇಲೆ ಕಾಂಟ್ರವರ್ಸಿ ಅನ್ನೋದು ಶುರುವಾಗುತ್ತೆ ತಲೆ ಕೆಡಿಸಿಕೊಳ್ಳಬೇಡ ಅಂತಾ ದೊಡ್ಡವರು ಹೇಳಿದ್ದಾರೆ ಅಂತಾ ನಟ ಧನ್ವೀರ್‌ ಹೇಳಿದ್ದಾರೆ.
lokesh

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

11 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

11 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

11 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

11 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

12 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

12 hours ago