ಚಿತ್ರ ಮಂಜರಿ

ಮೂರನೇ ದಿನಕ್ಕೆ 58ಕೋಟಿ ರೂಪಾಯಿ ಗಳಿಕೆ ಕಂಡ ‘ಕಾಟೇರ’

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಕಾಟೇರ’ ಡಿಸೆಂಬರ್‌ 29ರಂದು ತೆರೆಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಕೇವಲ ಮೂರೇ ದಿನದಲ್ಲಿ 50 ಕೋಟಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಿ, ಮೊದಲ ದಿನವೇ ಈ ಚಿತ್ರ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ ಈ ಸಿನಿಮಾ 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನ ಈ ಚಿತ್ರ 20.94 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆ ಮೂಲಕ ರಿಲೀಸ್‌ ಆದ ಮೂರೇ ದಿನಕ್ಕೆ ಕಾಟೇರ ೫೮ ಕೋಟಿ ರೂಗಳ ಗಳಿಕೆ ಕಂಡಿದೆ.

ಈ ಚಿತ್ರದ ಮೂಲಕ ನಟ ದರ್ಶನ್‌ ಅವರಿಗೆ ಈ ಚಿತ್ರ ದೊಟ್ಟ ಯಶಸ್ಸು ನೀಡಿದೆ. ಈ ವರ್ಷದಲ್ಲಿ ಹಲವಾರು ಚಿತ್ರಗಳು ತೆರೆ ಕಂಡವು, ಕೆಲವೊಂದು ಚಿತ್ರಗಳು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಿದ್ದವು. ಇದರ ನಡುವೆ ದರ್ಶನ್‌ ಅಭಿನಯದ ಕಾಟೇರ ಚಿತ್ರವು ಕನ್ನಡ ಭಾಷೆಯಲ್ಲಿ ರಿಲೀಸ್‌ ಆಗಿ ಭಾರೀ ಸದ್ದು ಮಾಡುತ್ತಿದ್ದು, ದರ್ಶನ್‌ ಫ್ಯಾನ್ಸ್‌ ಫುಲ್‌ ಖುಷ್‌ ಆಗಿದ್ದಾರೆ.

‘ಕಾಟೇರ’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳಿದ್ದವು. ಈ ಸಿನಿಮಾದ ಟ್ರೇಲರ್ ನೋಡಿ ಜನರು ಮೆಚ್ಚಿಕೊಂಡಿದ್ದರು. ಈ ಚಿತ್ರದಲ್ಲಿ ದರ್ಶನ್ ಅವರು ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಳ್ಳಿ ಜೀವನ, ಜಾತಿ ಪದ್ಧತಿ ಮತ್ತಿತ್ಯಾದಿ ವಿಚಾರಗಳ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗಿದೆ. ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ದರ್ಶನ್​ಗೆ ಜೊತೆಯಾಗಿ ಆರಾಧನಾ ರಾಮ್ ನಟಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ತರುಣ್‌ ಸುಧೀರ್‌ ಆಕ್ಷನ್‌ ಕಟ್‌ ಹೇಳಿದ್ದಾರೆ.

andolanait

Recent Posts

ಅಸ್ಸಾಂನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 80, ಕಾಂಗ್ರೆಸ್‌ 26,…

26 mins ago

ತಮಿಳುನಾಡು: ಮತ ಎಣಿಕೆಯ ಆರಂಭಿಕ ಟ್ರೆಂಡ್‌: ವಿಜಯ್‌ಗೆ ಅಧಿಕಾರ?

ಚೆನ್ನೈ: 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ತಮಿಳುನಾಡಿನಲ್ಲಿ ಈ ಬಾರಿ ತಮಿಳಗ…

31 mins ago

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಪಕ್ಷ ಕಮಾಲ್‌ ಮಾಡಿದೆ. ಈಗಿನ…

1 hour ago

ಬಾಗಲಕೋಟೆ ಫಲಿತಾಂಶ ; ಕಾಂಗೆಸ್‌ನ ಉಮೇಶ್‌ ಮೇಟಿಗೆ ಮುನ್ನಡೆ

ಬಾಗಲಕೋಟೆ : ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಫಲಿತಾಂಶ ಪ್ರಗತಿಯಲ್ಲಿದ್ದು ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿನ ನವನಗರದ ತೋಟಗಾರಿಕೆ ವಿವಿಯಲ್ಲಿ…

1 hour ago

ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ

ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…

2 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

2 hours ago