ಚಿತ್ರ ಮಂಜರಿ

ಮೂರನೇ ದಿನಕ್ಕೆ 58ಕೋಟಿ ರೂಪಾಯಿ ಗಳಿಕೆ ಕಂಡ ‘ಕಾಟೇರ’

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಕಾಟೇರ’ ಡಿಸೆಂಬರ್‌ 29ರಂದು ತೆರೆಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಕೇವಲ ಮೂರೇ ದಿನದಲ್ಲಿ 50 ಕೋಟಿ ಗಳಿಕೆ ಕಂಡು ಮುನ್ನುಗ್ಗುತ್ತಿದೆ.

‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಿ, ಮೊದಲ ದಿನವೇ ಈ ಚಿತ್ರ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ ಈ ಸಿನಿಮಾ 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನ ಈ ಚಿತ್ರ 20.94 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆ ಮೂಲಕ ರಿಲೀಸ್‌ ಆದ ಮೂರೇ ದಿನಕ್ಕೆ ಕಾಟೇರ ೫೮ ಕೋಟಿ ರೂಗಳ ಗಳಿಕೆ ಕಂಡಿದೆ.

ಈ ಚಿತ್ರದ ಮೂಲಕ ನಟ ದರ್ಶನ್‌ ಅವರಿಗೆ ಈ ಚಿತ್ರ ದೊಟ್ಟ ಯಶಸ್ಸು ನೀಡಿದೆ. ಈ ವರ್ಷದಲ್ಲಿ ಹಲವಾರು ಚಿತ್ರಗಳು ತೆರೆ ಕಂಡವು, ಕೆಲವೊಂದು ಚಿತ್ರಗಳು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌ ಆಗಿದ್ದವು. ಇದರ ನಡುವೆ ದರ್ಶನ್‌ ಅಭಿನಯದ ಕಾಟೇರ ಚಿತ್ರವು ಕನ್ನಡ ಭಾಷೆಯಲ್ಲಿ ರಿಲೀಸ್‌ ಆಗಿ ಭಾರೀ ಸದ್ದು ಮಾಡುತ್ತಿದ್ದು, ದರ್ಶನ್‌ ಫ್ಯಾನ್ಸ್‌ ಫುಲ್‌ ಖುಷ್‌ ಆಗಿದ್ದಾರೆ.

‘ಕಾಟೇರ’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳಿದ್ದವು. ಈ ಸಿನಿಮಾದ ಟ್ರೇಲರ್ ನೋಡಿ ಜನರು ಮೆಚ್ಚಿಕೊಂಡಿದ್ದರು. ಈ ಚಿತ್ರದಲ್ಲಿ ದರ್ಶನ್ ಅವರು ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಳ್ಳಿ ಜೀವನ, ಜಾತಿ ಪದ್ಧತಿ ಮತ್ತಿತ್ಯಾದಿ ವಿಚಾರಗಳ ಬಗ್ಗೆ ಈ ಚಿತ್ರದಲ್ಲಿ ಹೇಳಲಾಗಿದೆ. ರಾಕ್​ಲೈನ್ ವೆಂಕಟೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ದರ್ಶನ್​ಗೆ ಜೊತೆಯಾಗಿ ಆರಾಧನಾ ರಾಮ್ ನಟಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ತರುಣ್‌ ಸುಧೀರ್‌ ಆಕ್ಷನ್‌ ಕಟ್‌ ಹೇಳಿದ್ದಾರೆ.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago