ಚಿತ್ರ ಮಂಜರಿ

ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು: ನಟ ವಿಜಯ್‌

ಬೆಂಗಳೂರು: ಕರ್ನಾಟಕ –ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು , ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು . ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆʼʼ ಎಂದು ಬೆರದುಕೊಂಡಿದ್ದಾರೆ.

ʼʼನ್ಯಾಯಕ್ಕಾಗಿ ಕೈಚಾಚುತ್ತಿಲ್ಲ, ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿʼʼ ಎಂದು ವಿಜಯ್‌ ಟ್ವೀಟ್‌ ಮಾಡಿದ್ದಾರೆ.

ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ

ತಮಿಳುನಾಡಿಗೆ 5, 000 ಕ್ಯೂಸೆಕ್ಸ್ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಎಡಬ್ಲ್ಯು ಎಂಎ) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಲು ಸುಪ್ರೀಂಕೋರ್ಟ್ ಪ್ರಾಧಿಕಾರಕ್ಕೆ ಆದೇಶಿಸಿದೆ.

andolanait

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

21 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

1 hour ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

2 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

2 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

2 hours ago