ಚಿತ್ರ ಮಂಜರಿ

ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು: ನಟ ವಿಜಯ್‌

ಬೆಂಗಳೂರು: ಕರ್ನಾಟಕ –ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು , ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು . ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆʼʼ ಎಂದು ಬೆರದುಕೊಂಡಿದ್ದಾರೆ.

ʼʼನ್ಯಾಯಕ್ಕಾಗಿ ಕೈಚಾಚುತ್ತಿಲ್ಲ, ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿʼʼ ಎಂದು ವಿಜಯ್‌ ಟ್ವೀಟ್‌ ಮಾಡಿದ್ದಾರೆ.

ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ

ತಮಿಳುನಾಡಿಗೆ 5, 000 ಕ್ಯೂಸೆಕ್ಸ್ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಎಡಬ್ಲ್ಯು ಎಂಎ) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಲು ಸುಪ್ರೀಂಕೋರ್ಟ್ ಪ್ರಾಧಿಕಾರಕ್ಕೆ ಆದೇಶಿಸಿದೆ.

andolanait

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

49 seconds ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

4 mins ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

8 mins ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

13 mins ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

18 mins ago