ಚಿತ್ರ ಮಂಜರಿ

ಕೆಜಿಎಫ್‌ 3 ಸ್ಕ್ರಿಪ್ಟ್‌ ರೆಡಿ : ಪ್ರಶಾಂತ್‌ ನೀಲ್‌

ಯಶ್‌ ಹಾಗೂ ಪ್ರಶಾಂತ್‌ ನೀಲ್‌ ಕಾಂಬಿನೇಷನ್‌ ನ ಕೆಜಿಎಫ್‌ ಸಿನಿಮಾ ಪ್ಯಾನ್‌ ಇಂಡಿಯಾ ಲೆವೆಲ್‌ ನಲ್ಲಿ ಕಮಾಲ್‌ ಮಾಡುವ ಮೂಲಕ ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆದಿತ್ತು.

ಕೆಜಿಎಫ್‌ ಸಿನಿಮಾ ಸರಣಿಗಳು ಬಂದು ಹೋದ ಮೇಲೆ ರಾಕಿ ಬಾಯ್‌ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾದು ಕಾದು ಸುಸ್ತಾಗಿದ್ದಾರೆ. ಈ ನಡುವೆ ಆಗಾಗ ಯಶ್‌ ಮುಂದಿನ ಸಿನಿಮಾ ಬಗ್ಗೆ ಗಾಳಿ ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಜಿಎಫ್‌ 3 ಬರುತ್ತೆ ಎನ್ನುವ ಮಾತುಗಳು ಸಹ ಕೇಳಿ ಬರುತ್ತಿರುತ್ತದೆ. ಈ ಊಹಾ ಪೋಹಗಳಿಗೆ ಪುಷ್ಟಿ ನೀಡುವಂತೆ, ಪ್ರಶಾಂತ್‌ ನೀಲ್‌ ಅವರು ಆಂಗ್ಲ ಮಾಧ್ಯಮವೊಂದಕ್ಕೆ ಕೆಜಿಎಫ್‌ 3 ಬಗ್ಗೆಗಿನ ಮಾಹಿತಿ ಹಂಚಿಕೊಂಡಿದ್ದು, ಸ್ಕ್ರಿಪ್ಟ್‌ ರೆಡಿ ಇದೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.

ನಾಳೆ ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಆಗಲಿದ್ದು. ರಾಕಿಂಗ್‌ ಸ್ಟಾರ್‌ ಮುಂದಿನ ಸಿನಿಮಾ ಯಾವುದು ಎನ್ನುವ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬೀಳಲಿದೆ. ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋ ಬದಲಿಸಿದ್ದ ಯಶ್‌ ಲೋಡಿಂಗ್‌ ಎಂಬ ಬರಹವಿರುವ ಫೊಟೋವನ್ನು ಅಪ್ಲೋಡ್‌ ಮಾಡಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕ್ವೆಶ್ಚನ್‌ ಮಾರ್ಕ್‌ ಇರುವ ಫೊಟೋವೊಂದನ್ನು ಹಂಚಿಕೊಂಡು ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ಯಶ್‌ ಹೇಳಿಕೊಂಡಿದ್ದರು.

ಇದೀಗ ಎಲ್ಲಾ ಸಿನಿರಸಿಕರ ಚಿತ್ತ ಯಶ್‌ ಮುಂದಿನ ಸನಿಮಾದತ್ತ ನೆಟ್ಟಿದೆ. ಅಭಿಮಾನಿಗಳೆಲ್ಲರೂ ಕೂಡ ನಾಳೆ ಅನೌನ್ಸ್‌ ಆಗಲಿರುವ ರಾಕಿ ಬಾಯ್‌ ಮುಂದಿನ ಸಿನಿಮಾ ಅಪ್ಡೇಟ್‌ ಗಾಗಿ ಕಾತುರದಿಂದ ಕಾಯುತ್ತಾರೆ. ರಾಕಿಂಗ್‌ ಸ್ಟಾರ್ ಮುಂದಿನ ಸಿನಿಮಾ ಯಾವುದು ಅಂತಾ ನಾಳೆಯಷ್ಟೇ ತಿಳಿಯಬೇಕಿದೆ.

lokesh

Recent Posts

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

58 mins ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

2 hours ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

3 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

5 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

5 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

6 hours ago