ಚಿತ್ರ ಮಂಜರಿ

ನಾಳೆಯಿಂದ ಜಪಾನ್ ನಲ್ಲಿ ಕೆಜಿಎಫ್ ಹವಾ

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸರಣಿ ಸಿನಿಮಾಗಳು ರಿಲೀಸ್ ಆಗಿ ಹಲವು ವರ್ಷಗಳೇ ಕಳೆದಿವೆ. ಆದರೂ, ಅದರ ಕ್ರೇಜ್ ಇನ್ನೂ ನಿಂತಿಲ್ಲ. ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಕಮಾಯಿ ಮಾಡಿದವು. ಇದೀಗ ಈ ಎರಡೂ ಚಿತ್ರಗಳು ಜಪಾನ್ ಭಾಷೆಗೆ ಡಬ್ ಆಗಿ ರಿಲೀಸ್ ಆಗುತ್ತಿವೆ.

ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳನ್ನು ಈಗಾಗಲೇ ಜಪಾನ್ ಭಾಷೆಗೆ ಡಬ್ ಮಾಡಿದ್ದು, ಏಕಕಾಲಕ್ಕೆ ಎರಡೂ ಚಿತ್ರಗಳು ಜುಲೈ 14ರಂದು ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಜಪಾನ್ ನಲ್ಲಿ ಏಕಕಾಲಕ್ಕೆ ಸರಣಿ ಚಿತ್ರಗಳು ಬಿಡುಗಡೆ ಆಗುತ್ತಿರುವುದು ವಿಶೇಷ. ಈಗಾಗಲೇ ಈ ಕುರಿತು ಜಪಾನ್ ನಲ್ಲಿ ಪ್ರಚಾರ ಕಾರ್ಯ ಕೂಡ ಶುರು ಮಾಡಲಾಗಿದೆ. ಕೆಜಿಎಫ್ 1 ಸಿನಿಮಾ 91 ಶೋಗಳು ಹಾಗೂ ಕೆಜಿಎಫ್ 2 ಸಿನಿಮಾದ 85 ಶೋಗಳು ಮುಂಗಡವಾಗಿ ಈಗಾಗಲೇ ಬುಕ್ ಆಗಿವೆ.

ಕೆಜಿಎಫ್ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ನೋಡುಗರನ್ನು ತಲುಪಿದ್ದರು ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ಯಶ್. ಕೆಜಿಎಫ್ 1 ಮಾಡಿದ ಮೋಡಿಯೇ ಕೆಜಿಎಫ್ 2 ಚಿತ್ರಕ್ಕೆ ಸಾಕಷ್ಟು ಪ್ಲಸ್ ಪಾಯಿಂಟ್ ಆಯಿತು. ಮೊದಲ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ತಂದುಕೊಟ್ಟ ಹಣದ ಎರಡರಷ್ಟು ಪಾರ್ಟ್ 2 ಮಾಡಿತು. ಹೀಗಾಗಿ ಎರಡೂ ಚಿತ್ರಗಳ ಮೂಲಕ ಕೇವಲ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕನ್ನಡ ಚಿತ್ರಗಳಿಗೆ ಬೇಡಿಕೆ ಬಂತು.

ಆರ್.ಆರ್.ಆರ್ ಸಿನಿಮಾದ ನಂತರ ದಕ್ಷಿಣದ ಮತ್ತೊಂದು ಸಿನಿಮಾ ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿರುವುದು ಗುರುತಿಸಬೇಕಾದ ಸಂಗತಿ. ಜುಲೈ 14 ರಂದು ರಿಲೀಸ್ ಆಗುತ್ತಿರುವ ಚಿತ್ರಕ್ಕಾಗಿ ಯಶ್ ಜಪಾನ್ ಭಾಷೆಯಲ್ಲೇ ವಿಡಿಯೋವೊಂದನ್ನು ಮಾಡಿ, ಸಿನಿಮಾ ನೋಡುವಂತೆ ಅಲ್ಲಿನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಆರ್.ಆರ್.ಆರ್ ಸಿನಿಮಾ ಕೂಡ ಈ ಹಿಂದೆ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿತ್ತು. ನೂರು ಕೋಟಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಲ್ಲಿ ಲೂಟಿ ಮಾಡಿತ್ತು. ಆ ಸಿನಿಮಾ ಗೆಲುವು ಕಂಡ ಬೆನ್ನಲ್ಲೇ ಕೆಜಿಎಫ್ ಸಿನಿಮಾವನ್ನೂ ಜಪಾನ್ ಭಾಷೆಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ನಾಳೆ ಸಿನಿಮಾ ರಿಲೀಸ್ ಆಗುತ್ತಿದೆ.

lokesh

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

12 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

13 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

15 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago