ಚಿತ್ರ ಮಂಜರಿ

ನಾಳೆಯಿಂದ ಜಪಾನ್ ನಲ್ಲಿ ಕೆಜಿಎಫ್ ಹವಾ

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸರಣಿ ಸಿನಿಮಾಗಳು ರಿಲೀಸ್ ಆಗಿ ಹಲವು ವರ್ಷಗಳೇ ಕಳೆದಿವೆ. ಆದರೂ, ಅದರ ಕ್ರೇಜ್ ಇನ್ನೂ ನಿಂತಿಲ್ಲ. ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಕಮಾಯಿ ಮಾಡಿದವು. ಇದೀಗ ಈ ಎರಡೂ ಚಿತ್ರಗಳು ಜಪಾನ್ ಭಾಷೆಗೆ ಡಬ್ ಆಗಿ ರಿಲೀಸ್ ಆಗುತ್ತಿವೆ.

ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳನ್ನು ಈಗಾಗಲೇ ಜಪಾನ್ ಭಾಷೆಗೆ ಡಬ್ ಮಾಡಿದ್ದು, ಏಕಕಾಲಕ್ಕೆ ಎರಡೂ ಚಿತ್ರಗಳು ಜುಲೈ 14ರಂದು ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಜಪಾನ್ ನಲ್ಲಿ ಏಕಕಾಲಕ್ಕೆ ಸರಣಿ ಚಿತ್ರಗಳು ಬಿಡುಗಡೆ ಆಗುತ್ತಿರುವುದು ವಿಶೇಷ. ಈಗಾಗಲೇ ಈ ಕುರಿತು ಜಪಾನ್ ನಲ್ಲಿ ಪ್ರಚಾರ ಕಾರ್ಯ ಕೂಡ ಶುರು ಮಾಡಲಾಗಿದೆ. ಕೆಜಿಎಫ್ 1 ಸಿನಿಮಾ 91 ಶೋಗಳು ಹಾಗೂ ಕೆಜಿಎಫ್ 2 ಸಿನಿಮಾದ 85 ಶೋಗಳು ಮುಂಗಡವಾಗಿ ಈಗಾಗಲೇ ಬುಕ್ ಆಗಿವೆ.

ಕೆಜಿಎಫ್ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ನೋಡುಗರನ್ನು ತಲುಪಿದ್ದರು ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ಯಶ್. ಕೆಜಿಎಫ್ 1 ಮಾಡಿದ ಮೋಡಿಯೇ ಕೆಜಿಎಫ್ 2 ಚಿತ್ರಕ್ಕೆ ಸಾಕಷ್ಟು ಪ್ಲಸ್ ಪಾಯಿಂಟ್ ಆಯಿತು. ಮೊದಲ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ತಂದುಕೊಟ್ಟ ಹಣದ ಎರಡರಷ್ಟು ಪಾರ್ಟ್ 2 ಮಾಡಿತು. ಹೀಗಾಗಿ ಎರಡೂ ಚಿತ್ರಗಳ ಮೂಲಕ ಕೇವಲ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕನ್ನಡ ಚಿತ್ರಗಳಿಗೆ ಬೇಡಿಕೆ ಬಂತು.

ಆರ್.ಆರ್.ಆರ್ ಸಿನಿಮಾದ ನಂತರ ದಕ್ಷಿಣದ ಮತ್ತೊಂದು ಸಿನಿಮಾ ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿರುವುದು ಗುರುತಿಸಬೇಕಾದ ಸಂಗತಿ. ಜುಲೈ 14 ರಂದು ರಿಲೀಸ್ ಆಗುತ್ತಿರುವ ಚಿತ್ರಕ್ಕಾಗಿ ಯಶ್ ಜಪಾನ್ ಭಾಷೆಯಲ್ಲೇ ವಿಡಿಯೋವೊಂದನ್ನು ಮಾಡಿ, ಸಿನಿಮಾ ನೋಡುವಂತೆ ಅಲ್ಲಿನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಆರ್.ಆರ್.ಆರ್ ಸಿನಿಮಾ ಕೂಡ ಈ ಹಿಂದೆ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿತ್ತು. ನೂರು ಕೋಟಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಲ್ಲಿ ಲೂಟಿ ಮಾಡಿತ್ತು. ಆ ಸಿನಿಮಾ ಗೆಲುವು ಕಂಡ ಬೆನ್ನಲ್ಲೇ ಕೆಜಿಎಫ್ ಸಿನಿಮಾವನ್ನೂ ಜಪಾನ್ ಭಾಷೆಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ನಾಳೆ ಸಿನಿಮಾ ರಿಲೀಸ್ ಆಗುತ್ತಿದೆ.

lokesh

Recent Posts

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

20 mins ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

32 mins ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

54 mins ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

5 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

5 hours ago