ಚಿತ್ರ ಮಂಜರಿ

ಮೌನ ಮುರಿದ ಕಿಚ್ಚ: ನಿರ್ಮಾಪಕರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ!

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ ಎಂ.ಎನ್‌. ಕುಮಾರ್‌ ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್‌ ಕೊನೆಗೂ ಮೌನ ಮುರಿದಿದ್ದಾರೆ. “ಕಿಚ್ಚ ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ ಎಂಬುದು ಸೇರಿ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ ನೀಡಿದ್ದಾರೆ. ಹಾಗೆಯೇ, ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಿದ್ದಾರೆ.

ಇತ್ತೀಚೆಗೆ ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದರು. ಸುದ್ದಿಗೋಷ್ಠಿಯಲ್ಲಿ ಕಿಚ್ಚನ ವಿರುದ್ಧ ಸಾಕಷ್ಟು ಆರೋಪ ಮಾಡಿದ್ದರು. ಹಣ ಪಡೆದು ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಆದರೆ ಈ ವಿಚಾರವಾಗಿ ಮೌನವಾಗಿದ್ದ ಕಿಚ್ಚ ಇದೀಗ ಕಾನೂನು ಮೊರೆ ಹೋಗಿದ್ದಾರೆ.

ಸುದೀಪ್‌ ಪರ ವಕೀಲರು ನೋಟಿಸ್‌ ಕಳುಹಿಸಿದ್ದಾರೆ. “ಸುದೀಪ್‌ ಅವರು ಚಿತ್ರರಂಗದಲ್ಲಿ 20 ವರ್ಷದಿಂದ ನಟಿಸುತ್ತಿರುವ ಪ್ರತಿಭಾನ್ವಿತ ನಟರಾಗಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹಲವು ಪ್ರಶಸ್ತಿ ಪಡೆದಿದ್ದಾರೆ. ಸಮಾಜ ಸೇವೆಯ ಮೂಲಕವೂ ಜನರಿಗೆ ಮಾದರಿಯಾಗಿದ್ದಾರೆ. ಅವರ ವಿರುದ್ಧ ನೀವು ಮಾಡಿರುವ ಆರೋಪಗಳು ಸುಳ್ಳಾಗಿದ್ದು, ಮಾನಹಾನಿ ಉಂಟು ಮಾಡಿವೆ. ಹಾಗಾಗಿ ನೀವು ಕ್ಷಮೆಯಾಚಿಸಬೇಕು ಹಾಗೂ ಪರಿಹಾರ ಕೊಡಬೇಕು” ಎಂದು ಸುದೀಪ್‌ ಪರ ವಕೀಲರು ಕಳುಹಿಸಿದ ಲೀಗಲ್‌ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿಚ್ಚ ಕಳುಹಿಸಿದ ನೊಟೀಸ್​ನಲ್ಲಿ ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತು ಪಡಿಸಿ. ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ ದಂಡ ಕಟ್ಟಿಕೊಡಿ’ ಎಂದು ಹೇಳಿದ್ದಾರೆ.

ಸುದೀಪ್‌ ಅವರ ವಿರುದ್ಧ ನೀವು ಮಾಡಿರುವ ಆರೋಪಗಳಿಗೆ ಮುದ್ರಣ, ಎಲೆಕ್ಟ್ರಾನಿಕ್‌ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಹಾಗೆಯೇ, ಅವರ ಮಾನಹಾನಿ ಮಾಡಿದ ಹಿನ್ನೆಲೆಯಲ್ಲಿ 10 ಕೋಟಿ ರೂಪಾಯಿ ಪರಿಹಾರ ನೀಡಬೇಕು. ನೋಟಿಸ್‌ ಕಳುಹಿಸಲು ತಗುಲಿದ 50 ಸಾವಿರ ರೂಪಾಯಿಯನ್ನೂ ನೀವೇ ನೀಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಸಲಾಗಿದೆ.

andolanait

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

2 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

6 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

22 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

23 hours ago