ಚಿತ್ರ ಮಂಜರಿ

ಮೌನ ಮುರಿದ ಕಿಚ್ಚ: ನಿರ್ಮಾಪಕರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ!

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ ಎಂ.ಎನ್‌. ಕುಮಾರ್‌ ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್‌ ಕೊನೆಗೂ ಮೌನ ಮುರಿದಿದ್ದಾರೆ. “ಕಿಚ್ಚ ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ ಎಂಬುದು ಸೇರಿ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ ನೀಡಿದ್ದಾರೆ. ಹಾಗೆಯೇ, ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಿದ್ದಾರೆ.

ಇತ್ತೀಚೆಗೆ ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದರು. ಸುದ್ದಿಗೋಷ್ಠಿಯಲ್ಲಿ ಕಿಚ್ಚನ ವಿರುದ್ಧ ಸಾಕಷ್ಟು ಆರೋಪ ಮಾಡಿದ್ದರು. ಹಣ ಪಡೆದು ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಆದರೆ ಈ ವಿಚಾರವಾಗಿ ಮೌನವಾಗಿದ್ದ ಕಿಚ್ಚ ಇದೀಗ ಕಾನೂನು ಮೊರೆ ಹೋಗಿದ್ದಾರೆ.

ಸುದೀಪ್‌ ಪರ ವಕೀಲರು ನೋಟಿಸ್‌ ಕಳುಹಿಸಿದ್ದಾರೆ. “ಸುದೀಪ್‌ ಅವರು ಚಿತ್ರರಂಗದಲ್ಲಿ 20 ವರ್ಷದಿಂದ ನಟಿಸುತ್ತಿರುವ ಪ್ರತಿಭಾನ್ವಿತ ನಟರಾಗಿದ್ದು, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹಲವು ಪ್ರಶಸ್ತಿ ಪಡೆದಿದ್ದಾರೆ. ಸಮಾಜ ಸೇವೆಯ ಮೂಲಕವೂ ಜನರಿಗೆ ಮಾದರಿಯಾಗಿದ್ದಾರೆ. ಅವರ ವಿರುದ್ಧ ನೀವು ಮಾಡಿರುವ ಆರೋಪಗಳು ಸುಳ್ಳಾಗಿದ್ದು, ಮಾನಹಾನಿ ಉಂಟು ಮಾಡಿವೆ. ಹಾಗಾಗಿ ನೀವು ಕ್ಷಮೆಯಾಚಿಸಬೇಕು ಹಾಗೂ ಪರಿಹಾರ ಕೊಡಬೇಕು” ಎಂದು ಸುದೀಪ್‌ ಪರ ವಕೀಲರು ಕಳುಹಿಸಿದ ಲೀಗಲ್‌ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಿಚ್ಚ ಕಳುಹಿಸಿದ ನೊಟೀಸ್​ನಲ್ಲಿ ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತು ಪಡಿಸಿ. ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ ದಂಡ ಕಟ್ಟಿಕೊಡಿ’ ಎಂದು ಹೇಳಿದ್ದಾರೆ.

ಸುದೀಪ್‌ ಅವರ ವಿರುದ್ಧ ನೀವು ಮಾಡಿರುವ ಆರೋಪಗಳಿಗೆ ಮುದ್ರಣ, ಎಲೆಕ್ಟ್ರಾನಿಕ್‌ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಹಾಗೆಯೇ, ಅವರ ಮಾನಹಾನಿ ಮಾಡಿದ ಹಿನ್ನೆಲೆಯಲ್ಲಿ 10 ಕೋಟಿ ರೂಪಾಯಿ ಪರಿಹಾರ ನೀಡಬೇಕು. ನೋಟಿಸ್‌ ಕಳುಹಿಸಲು ತಗುಲಿದ 50 ಸಾವಿರ ರೂಪಾಯಿಯನ್ನೂ ನೀವೇ ನೀಡಬೇಕು. ಇಲ್ಲದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಸಲಾಗಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

6 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

6 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago