ಚಿತ್ರ ಮಂಜರಿ

ಬಿಗ್‌ಬಾಸ್‌ ಮನೆಯಿಂದ ಹೊರನಡೆವ ವರ್ತೂರ್‌ ನಿರ್ಧಾರಕ್ಕೆ ಕಿಚ್ಚ ಬೇಸರ

ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10ನ ಸ್ಪರ್ಧಿ ವರ್ತೂರ್‌ ಸಂತೋಷ್‌ ಅವರು ದೊಡ್ಮನೆಯಿಂದ ಹೊರನಡೆಯುವ ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರದಿಂದ ಶೋ ಹೋಸ್ಟರ್‌ ಕಿಚ್ಚ ಸುದೀಪ್‌ ಬೇಸರ ಹೊರ ಹಾಕಿದ್ದು, ವೇದಿಕೆಯಿಂದಲೇ ಹೊರ ನಡೆದಿದ್ದಾರೆ.

ಹುಲಿ ಉಗುರಿನ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನಿನ ಮೇಲೆ ಹೊರಬಂದು ಬಗ್‌ಬಾಸ್‌ ಮನೆಗೆ ಬಂದಿದ್ದರು. ಬಿಗ್‌ಬಾಸ್‌ ಗೆಲ್ಲಲೇ ಬೇಕೆಂದು ಅವರ ಅಪಾರ ಅಭಿಮಾನಿ ಬಳಗ ಆಶಿಸಿತ್ತು.

ಪ್ರತಿ ವಾರದಂತೆ ಈ ವಾರದ ನಾಮಿನೇಷನ್‌ ಪ್ರಕ್ರಿಯೆಯಲ್ಲಿ ವರ್ತೂರ್‌ ಸಂತೋಷ್‌ ಅವರನ್ನು ಕಿಚ್ಚ ಸುದೀಪ್‌ ಅವರು ಸೇಪ್‌ ಎಂದು ಘೋಷಿಸಿದರು. ಅವರ ಮಾತು ಕೇಳಿ ಭಾವುಕರಾದ ಸಂತೋಷ್‌, ಹೊರಗಡೆ ಒಂದು ಘಟನೆ ನಡೆದಿದೆ. ಅದರಿಂದ ಹೊರಬಂದು ಬಿಗ್‌ಬಾಸ್‌ ಮನೆಯಲ್ಲಿ ಆಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಾನು ಹೊರಗಡೆ ಇರಲು ಬಯಸುತ್ತೇನೆ ಎಂದು ಹಠ ಹಿಡಿದರು.

ಇದರಿಂದ ಬೇಸರಗೊಂಡ ಕಿಚ್ಚ ನಿಮಗೆ ಜನರು 34,15,472 ಮತಗಳನ್ನು ನೀಡಿದ್ದಾರೆ, ಆ ಜನಗಳ ವಿರುದ್ಧ ನಾನು ಹೋಗಲು ಆಗುವುದಿಲ್ಲ ನಾನು ಹೋಗುವುದು ಇಲ್ಲ. ನಿಮ್ಮಿಂದ ನನಗೆ ಬೇಸರವಾಗಿದೆ ಎಂದು ವೇದಿಕೆಯಿಂದಲೇ ಹೊರ ನಡೆದಿದ್ದಾರೆ.

ಸ್ನೇಹಿತ್‌, ನೀತು, ಇಶಾನಿ ಮತ್ತು ವರ್ತೂರ್‌ ಎಲಿಮಿನೇಷನ್‌ ಪ್ರಕ್ರಿಯೆಗೆ ನಾಮಿನಿಯಾಗಿದ್ದರು. ಇವರಲ್ಲಿ ವರ್ತೂರ್‌ ಸೇಫ್‌ ಆಗಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago