ಚಿತ್ರ ಮಂಜರಿ

ಬಿಗ್‌ಬಾಸ್‌ ಮನೆಯಿಂದ ಹೊರನಡೆವ ವರ್ತೂರ್‌ ನಿರ್ಧಾರಕ್ಕೆ ಕಿಚ್ಚ ಬೇಸರ

ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10ನ ಸ್ಪರ್ಧಿ ವರ್ತೂರ್‌ ಸಂತೋಷ್‌ ಅವರು ದೊಡ್ಮನೆಯಿಂದ ಹೊರನಡೆಯುವ ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರದಿಂದ ಶೋ ಹೋಸ್ಟರ್‌ ಕಿಚ್ಚ ಸುದೀಪ್‌ ಬೇಸರ ಹೊರ ಹಾಕಿದ್ದು, ವೇದಿಕೆಯಿಂದಲೇ ಹೊರ ನಡೆದಿದ್ದಾರೆ.

ಹುಲಿ ಉಗುರಿನ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನಿನ ಮೇಲೆ ಹೊರಬಂದು ಬಗ್‌ಬಾಸ್‌ ಮನೆಗೆ ಬಂದಿದ್ದರು. ಬಿಗ್‌ಬಾಸ್‌ ಗೆಲ್ಲಲೇ ಬೇಕೆಂದು ಅವರ ಅಪಾರ ಅಭಿಮಾನಿ ಬಳಗ ಆಶಿಸಿತ್ತು.

ಪ್ರತಿ ವಾರದಂತೆ ಈ ವಾರದ ನಾಮಿನೇಷನ್‌ ಪ್ರಕ್ರಿಯೆಯಲ್ಲಿ ವರ್ತೂರ್‌ ಸಂತೋಷ್‌ ಅವರನ್ನು ಕಿಚ್ಚ ಸುದೀಪ್‌ ಅವರು ಸೇಪ್‌ ಎಂದು ಘೋಷಿಸಿದರು. ಅವರ ಮಾತು ಕೇಳಿ ಭಾವುಕರಾದ ಸಂತೋಷ್‌, ಹೊರಗಡೆ ಒಂದು ಘಟನೆ ನಡೆದಿದೆ. ಅದರಿಂದ ಹೊರಬಂದು ಬಿಗ್‌ಬಾಸ್‌ ಮನೆಯಲ್ಲಿ ಆಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಾನು ಹೊರಗಡೆ ಇರಲು ಬಯಸುತ್ತೇನೆ ಎಂದು ಹಠ ಹಿಡಿದರು.

ಇದರಿಂದ ಬೇಸರಗೊಂಡ ಕಿಚ್ಚ ನಿಮಗೆ ಜನರು 34,15,472 ಮತಗಳನ್ನು ನೀಡಿದ್ದಾರೆ, ಆ ಜನಗಳ ವಿರುದ್ಧ ನಾನು ಹೋಗಲು ಆಗುವುದಿಲ್ಲ ನಾನು ಹೋಗುವುದು ಇಲ್ಲ. ನಿಮ್ಮಿಂದ ನನಗೆ ಬೇಸರವಾಗಿದೆ ಎಂದು ವೇದಿಕೆಯಿಂದಲೇ ಹೊರ ನಡೆದಿದ್ದಾರೆ.

ಸ್ನೇಹಿತ್‌, ನೀತು, ಇಶಾನಿ ಮತ್ತು ವರ್ತೂರ್‌ ಎಲಿಮಿನೇಷನ್‌ ಪ್ರಕ್ರಿಯೆಗೆ ನಾಮಿನಿಯಾಗಿದ್ದರು. ಇವರಲ್ಲಿ ವರ್ತೂರ್‌ ಸೇಫ್‌ ಆಗಿದ್ದರು.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

4 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

5 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

5 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

5 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

5 hours ago