ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ನ ಸ್ಪರ್ಧಿ ವರ್ತೂರ್ ಸಂತೋಷ್ ಅವರು ದೊಡ್ಮನೆಯಿಂದ ಹೊರನಡೆಯುವ ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರದಿಂದ ಶೋ ಹೋಸ್ಟರ್ ಕಿಚ್ಚ ಸುದೀಪ್ ಬೇಸರ ಹೊರ ಹಾಕಿದ್ದು, ವೇದಿಕೆಯಿಂದಲೇ ಹೊರ ನಡೆದಿದ್ದಾರೆ.
ಹುಲಿ ಉಗುರಿನ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನಿನ ಮೇಲೆ ಹೊರಬಂದು ಬಗ್ಬಾಸ್ ಮನೆಗೆ ಬಂದಿದ್ದರು. ಬಿಗ್ಬಾಸ್ ಗೆಲ್ಲಲೇ ಬೇಕೆಂದು ಅವರ ಅಪಾರ ಅಭಿಮಾನಿ ಬಳಗ ಆಶಿಸಿತ್ತು.
ಪ್ರತಿ ವಾರದಂತೆ ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ವರ್ತೂರ್ ಸಂತೋಷ್ ಅವರನ್ನು ಕಿಚ್ಚ ಸುದೀಪ್ ಅವರು ಸೇಪ್ ಎಂದು ಘೋಷಿಸಿದರು. ಅವರ ಮಾತು ಕೇಳಿ ಭಾವುಕರಾದ ಸಂತೋಷ್, ಹೊರಗಡೆ ಒಂದು ಘಟನೆ ನಡೆದಿದೆ. ಅದರಿಂದ ಹೊರಬಂದು ಬಿಗ್ಬಾಸ್ ಮನೆಯಲ್ಲಿ ಆಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಾನು ಹೊರಗಡೆ ಇರಲು ಬಯಸುತ್ತೇನೆ ಎಂದು ಹಠ ಹಿಡಿದರು.
ಇದರಿಂದ ಬೇಸರಗೊಂಡ ಕಿಚ್ಚ ನಿಮಗೆ ಜನರು 34,15,472 ಮತಗಳನ್ನು ನೀಡಿದ್ದಾರೆ, ಆ ಜನಗಳ ವಿರುದ್ಧ ನಾನು ಹೋಗಲು ಆಗುವುದಿಲ್ಲ ನಾನು ಹೋಗುವುದು ಇಲ್ಲ. ನಿಮ್ಮಿಂದ ನನಗೆ ಬೇಸರವಾಗಿದೆ ಎಂದು ವೇದಿಕೆಯಿಂದಲೇ ಹೊರ ನಡೆದಿದ್ದಾರೆ.
ಸ್ನೇಹಿತ್, ನೀತು, ಇಶಾನಿ ಮತ್ತು ವರ್ತೂರ್ ಎಲಿಮಿನೇಷನ್ ಪ್ರಕ್ರಿಯೆಗೆ ನಾಮಿನಿಯಾಗಿದ್ದರು. ಇವರಲ್ಲಿ ವರ್ತೂರ್ ಸೇಫ್ ಆಗಿದ್ದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…