ಚಿತ್ರ ಮಂಜರಿ

ಬಿಗ್‌ಬಾಸ್‌ ಮನೆಯಿಂದ ಹೊರನಡೆವ ವರ್ತೂರ್‌ ನಿರ್ಧಾರಕ್ಕೆ ಕಿಚ್ಚ ಬೇಸರ

ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 10ನ ಸ್ಪರ್ಧಿ ವರ್ತೂರ್‌ ಸಂತೋಷ್‌ ಅವರು ದೊಡ್ಮನೆಯಿಂದ ಹೊರನಡೆಯುವ ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರದಿಂದ ಶೋ ಹೋಸ್ಟರ್‌ ಕಿಚ್ಚ ಸುದೀಪ್‌ ಬೇಸರ ಹೊರ ಹಾಕಿದ್ದು, ವೇದಿಕೆಯಿಂದಲೇ ಹೊರ ನಡೆದಿದ್ದಾರೆ.

ಹುಲಿ ಉಗುರಿನ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನಿನ ಮೇಲೆ ಹೊರಬಂದು ಬಗ್‌ಬಾಸ್‌ ಮನೆಗೆ ಬಂದಿದ್ದರು. ಬಿಗ್‌ಬಾಸ್‌ ಗೆಲ್ಲಲೇ ಬೇಕೆಂದು ಅವರ ಅಪಾರ ಅಭಿಮಾನಿ ಬಳಗ ಆಶಿಸಿತ್ತು.

ಪ್ರತಿ ವಾರದಂತೆ ಈ ವಾರದ ನಾಮಿನೇಷನ್‌ ಪ್ರಕ್ರಿಯೆಯಲ್ಲಿ ವರ್ತೂರ್‌ ಸಂತೋಷ್‌ ಅವರನ್ನು ಕಿಚ್ಚ ಸುದೀಪ್‌ ಅವರು ಸೇಪ್‌ ಎಂದು ಘೋಷಿಸಿದರು. ಅವರ ಮಾತು ಕೇಳಿ ಭಾವುಕರಾದ ಸಂತೋಷ್‌, ಹೊರಗಡೆ ಒಂದು ಘಟನೆ ನಡೆದಿದೆ. ಅದರಿಂದ ಹೊರಬಂದು ಬಿಗ್‌ಬಾಸ್‌ ಮನೆಯಲ್ಲಿ ಆಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಾನು ಹೊರಗಡೆ ಇರಲು ಬಯಸುತ್ತೇನೆ ಎಂದು ಹಠ ಹಿಡಿದರು.

ಇದರಿಂದ ಬೇಸರಗೊಂಡ ಕಿಚ್ಚ ನಿಮಗೆ ಜನರು 34,15,472 ಮತಗಳನ್ನು ನೀಡಿದ್ದಾರೆ, ಆ ಜನಗಳ ವಿರುದ್ಧ ನಾನು ಹೋಗಲು ಆಗುವುದಿಲ್ಲ ನಾನು ಹೋಗುವುದು ಇಲ್ಲ. ನಿಮ್ಮಿಂದ ನನಗೆ ಬೇಸರವಾಗಿದೆ ಎಂದು ವೇದಿಕೆಯಿಂದಲೇ ಹೊರ ನಡೆದಿದ್ದಾರೆ.

ಸ್ನೇಹಿತ್‌, ನೀತು, ಇಶಾನಿ ಮತ್ತು ವರ್ತೂರ್‌ ಎಲಿಮಿನೇಷನ್‌ ಪ್ರಕ್ರಿಯೆಗೆ ನಾಮಿನಿಯಾಗಿದ್ದರು. ಇವರಲ್ಲಿ ವರ್ತೂರ್‌ ಸೇಫ್‌ ಆಗಿದ್ದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

5 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

5 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago