ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10ನ ಸ್ಪರ್ಧಿ ವರ್ತೂರ್ ಸಂತೋಷ್ ಅವರು ದೊಡ್ಮನೆಯಿಂದ ಹೊರನಡೆಯುವ ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರದಿಂದ ಶೋ ಹೋಸ್ಟರ್ ಕಿಚ್ಚ ಸುದೀಪ್ ಬೇಸರ ಹೊರ ಹಾಕಿದ್ದು, ವೇದಿಕೆಯಿಂದಲೇ ಹೊರ ನಡೆದಿದ್ದಾರೆ.
ಹುಲಿ ಉಗುರಿನ ಪ್ರಕರಣದಲ್ಲಿ ಬಂಧಿತರಾಗಿ ನಂತರ ಜಾಮೀನಿನ ಮೇಲೆ ಹೊರಬಂದು ಬಗ್ಬಾಸ್ ಮನೆಗೆ ಬಂದಿದ್ದರು. ಬಿಗ್ಬಾಸ್ ಗೆಲ್ಲಲೇ ಬೇಕೆಂದು ಅವರ ಅಪಾರ ಅಭಿಮಾನಿ ಬಳಗ ಆಶಿಸಿತ್ತು.
ಪ್ರತಿ ವಾರದಂತೆ ಈ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ವರ್ತೂರ್ ಸಂತೋಷ್ ಅವರನ್ನು ಕಿಚ್ಚ ಸುದೀಪ್ ಅವರು ಸೇಪ್ ಎಂದು ಘೋಷಿಸಿದರು. ಅವರ ಮಾತು ಕೇಳಿ ಭಾವುಕರಾದ ಸಂತೋಷ್, ಹೊರಗಡೆ ಒಂದು ಘಟನೆ ನಡೆದಿದೆ. ಅದರಿಂದ ಹೊರಬಂದು ಬಿಗ್ಬಾಸ್ ಮನೆಯಲ್ಲಿ ಆಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನಾನು ಹೊರಗಡೆ ಇರಲು ಬಯಸುತ್ತೇನೆ ಎಂದು ಹಠ ಹಿಡಿದರು.
ಇದರಿಂದ ಬೇಸರಗೊಂಡ ಕಿಚ್ಚ ನಿಮಗೆ ಜನರು 34,15,472 ಮತಗಳನ್ನು ನೀಡಿದ್ದಾರೆ, ಆ ಜನಗಳ ವಿರುದ್ಧ ನಾನು ಹೋಗಲು ಆಗುವುದಿಲ್ಲ ನಾನು ಹೋಗುವುದು ಇಲ್ಲ. ನಿಮ್ಮಿಂದ ನನಗೆ ಬೇಸರವಾಗಿದೆ ಎಂದು ವೇದಿಕೆಯಿಂದಲೇ ಹೊರ ನಡೆದಿದ್ದಾರೆ.
ಸ್ನೇಹಿತ್, ನೀತು, ಇಶಾನಿ ಮತ್ತು ವರ್ತೂರ್ ಎಲಿಮಿನೇಷನ್ ಪ್ರಕ್ರಿಯೆಗೆ ನಾಮಿನಿಯಾಗಿದ್ದರು. ಇವರಲ್ಲಿ ವರ್ತೂರ್ ಸೇಫ್ ಆಗಿದ್ದರು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…