ಬೆಂಗಳೂರು : ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ನಟ ಕಿಚ್ಚ ಸುದೀಪ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ.
ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಸಲಾಂ ಎಂದಿದ್ದಾರೆ.
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…